Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ ಬಳಿ ಭೀಕರ ಅಪಘಾತ : ನಾಲ್ವರು ಸಾವು

ನಾಗಮಂಗಲ ತಾಲ್ಲೂಕಿನ ಎ.ನಾಗತಿಹಳ್ಳಿ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.

ಹಾಸನದಿಂದ ಬೆಂಗಳೂರಿಗೆ ಬರುತ್ತಿದ್ದ ಮಾರುತಿ ಶಿಫ್ಟ್ ಕಾರು ಹಾಗೂ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿನ ನಡುವೆ ಎ.ನಾಗತಿಹಳ್ಳಿ ಬಳಿ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಿಂಡಿಗನವಿಲೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಗಾಯಗಳುಗಳನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!