ಈ ಹಿಂದೆ ಕೆಎಂಎಫ್ ನ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಪುನೀತ್ ರಾಜ್ ಕುಮಾರ್ ಅವರು ಕಾಣಿಸಿಕೊಂಡಿದ್ದರು. ಅವರ ನಿಧನದ ನಂತರ ಅವರ ಸಹೋದರ ಶಿವರಾಜ್ ಕುಮಾರ್ ನಂದಿನಿ ಪ್ರಚಾರ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ.
ಇಂದು ಕೆಎಂಎಫ್ ಅಧ್ಯಕ್ಷ ಭೀಮ್ ನಾಯ್ಕ್ ಅವರು, ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಡಾ|| @NimmaShivanna ರವರನ್ನು “ನಂದಿನಿ” ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವ ಕರುನಾಡ ಚಕ್ರವರ್ತಿಗೆ ಅಭಿನಂದನೆ ಸಲ್ಲಿಸಿ ಶುಭ ಕೊರಲಾಯಿತು.
ಅವರಿಗೆ ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ ರೈತರ ಹಾಗೂ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು🙏💐💐 pic.twitter.com/MBwRh1dX3v— Bheema Naik (@BheemaNaikINC) August 1, 2023
“>
ಈ ಹಿಂದೆ ಪ್ರಪ್ರಥಮ ಬಾರಿಗೆ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ವರನಟ ಡಾ.ರಾಜ್ ಕುಮಾರ್ ಯಾವುದೇ ಸಂಭಾವನೆ ಪಡೆಯದೇ ಕಾಣಿಸಿಕೊಂಡಿದ್ದರು. ತದನಂತರ ಅವರ ದಾರಿಯಲ್ಲೇ ನಡೆದ ಪುತ್ರ ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ ಪ್ರಚಾರ ರಾಯಭಾರಿಗಳಾಗಿದ್ದರು. ಅವರು ಕೂಡ ಯಾವುದೇ ಸಂಭಾವನೆ ಪಡೆದಿರಲಿಲ್ಲ.