ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ.
ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ.
ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ?#ModiAashirvadFor40Percent pic.twitter.com/oa20LA7OVk
— Karnataka Congress (@INCKarnataka) April 21, 2023
“>
ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರಕ್ಕೆ ಮಹಾಪೋಷಕರು ಎಂದು ಕಾಂಗ್ರೆಸ್ ಕಿಡಿಕಾರಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ ಎಂದು ಕಾಂಗ್ರೆಸ್ ಕಾಲೆಳೆದಿದೆ.