Thursday, September 19, 2024

ಪ್ರಾಯೋಗಿಕ ಆವೃತ್ತಿ

ಶಿಕ್ಷಣ ಕ್ಷೇತ್ರ ಬದಲಾವಣೆಗೆ ಹೆಚ್ಚು ಒತ್ತು : ನರೇಂದ್ರಸ್ವಾಮಿ

ಮುಂದಿನ ದಿನಗಳಲ್ಲಿ ಶಿಕ್ಷಣಕ್ಕೆ ಹೊತ್ತು ನೀಡಿ, ಇನ್ನೂ ಎರಡು ವರ್ಷದಲ್ಲಿ ತಾಲೂಕಿನಲ್ಲಿ ಸರ್ಕಾರಿ ಶಿಕ್ಷಣ ಕ್ಷೇತ್ರದ ಚಿತ್ರಣವನ್ನೇ ಬದಲಾವಣೆ ಮಾಡುತ್ತೇನೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭರವಸೆ ನೀಡಿದರು.

ಮಳವಳ್ಳಿ ತಾಲ್ಲೂಕಿನ ಮಾರೇಹಳ್ಳಿ ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಜಾಗತಿಕ ಜಗತ್ತಿನಲ್ಲಿ ಪೋಷಕರು ಸಂಸ್ಕೃತಿಯ ಜೊತೆಗೆ ವೈಜ್ಞಾನಿಕವಾಗಿ ಮಕ್ಕಳಿಗೆ ಕಲಿಸುವ ರೂಢಿಯನ್ನು ಬಾಲ್ಯದಿಂದ ಮಾಡಿದರೆ, ಉತ್ತಮ ಶಿಕ್ಷಣ ಪಡೆಯಬಹುದು ಎಂದರು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳು ವೇಷಭೂಷಣ ಹಾಕಿ ಪ್ರದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಬಿಇಓ ಚಂದ್ರಪಾಟೀಲ್, ಆರ್ ಎಂ ಸಿ ಆದರ್ಶ ವಿದ್ಯಾ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷ ನಾಗರಾಜು, ಸಮನ್ವಯ ಅಧಿಕಾರಿ ಶ್ರೀನಿವಾಸ್, ಅಕ್ಷರ ದಾಸೋಹ ಅಧಿಕಾರಿ ಮಾದಯ್ಯ, ಮುಖ್ಯ ಶಿಕ್ಷಕ ಶಿವರಾಜ್ ಸೇರಿದಂತೆ ಹಲವರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!