ಮಂಡ್ಯ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾಗಿ ಎಚ್. ಶಿವರಾಮೇಗೌಡ ಅಧಿಕಾರ ಸ್ವೀಕರಿಸಿದರು.
ಉಪ ನಿರ್ದೇಶಕರಾಗಿ ನಿಯೋಜನೆಗೊಂಡಿದ್ದ ಅವರು ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಕಾರ್ಯ ಆರಂಭ ಮಾಡಿದರು. ನಂತರ ಮಾತನಾಡಿದ ಅವರು ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಸಂಕಲ್ಪ ಮಾಡಿದ್ದೇನೆ, ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಉತ್ತಮವಾಗಿ ಕಾರ್ಯನಿರ್ವಹಿಸಿ ಅಗತ್ಯ ಸಲಹೆ, ಸೂಚನೆ ನೀಡುವ ಮೂಲಕ ಇಲಾಖೆಯನ್ನು ಸಮರ್ಥವಾಗಿ ಮುನ್ನಡೆಸುತ್ತೇನೆ, ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ಮಟ್ಟ ಅವಶ್ಯಕವಾಗಿದ್ದು ಆ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಹೇಳಿದರು.
ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತು ಶೈಕ್ಷಣಿಕ ವಲಯ ಸಹಕರಿಸಬೇಕು, ಎಲ್ಲರೂ ಸೇರಿ ಶಿಕ್ಷಣದ ಗುಣಮಟ್ಟ ಉನ್ನತೀಕರಿಸಲು ಶ್ರಮಿಸೋಣ ಎಂದು ಹೇಳಿದರು.