ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ ಅವರನ್ನು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.
ನಾಡು-ನುಡಿಯ ವಿಚಾರದಲ್ಲಿ ಶ್ರಮಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳಿಗೆ ಸಹಕಾರ ನೀಡುವಂತೆ ನೂತನ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಅವರನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ
ಸಿ.ಕೆ.ರವಿಕುಮಾರ ಚಾಮಲಾಪುರ, ಕೋಶಾಧ್ಯಕ್ಷ ಬಿ.ಎಂ. ಅಪ್ಪಾಜಪ್ಪ,ಗೌರವ ಕಾರ್ಯದರ್ಶಿ ಜಿ. ಧನಂಜಯ, ಸಂಘಟನಾ ಕಾರ್ಯದರ್ಶಿ ಎಂ.ಸಿ. ಭಾಸ್ಕರ್, ಕೀಲಾರ ಕೃಷ್ಣೇಗೌಡ ಉಪಸ್ಥಿತರಿದ್ದರು.