Thursday, September 19, 2024

ಪ್ರಾಯೋಗಿಕ ಆವೃತ್ತಿ

ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದಗುಡಿ ಬಿಡುಗಡೆ ಹಿನ್ನೆಲೆಯಲ್ಲಿ ಇಂದು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂನಲ್ಲಿರುವ ನಿಮಿಷಾಂಭ ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಬೆಳಿಗ್ಗೆ ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಗಂಧದಗುಡಿ ಚಿತ್ರ ಯಶಸ್ವಿಯಾಗಲೆಂದು ಪ್ರಾರ್ಥನೆ ಸಲ್ಲಿಸಿದರು.

ಪೂಜೆ ಸಲ್ಲಿಕೆ ವೇಳೆ ಗಂಧದಗುಡಿ ಚಿತ್ರದ ನಿರ್ದೇಶಕ ಅಮೋಘ ವರ್ಷ ಕೂಡ ಹಾಜರಿದ್ದು,ನಿಮಿಷಾಂಭ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಅಮೋಘ ವರ್ಷ,ಅಭಿಮಾನಿಗಳಿಗೆ ಪುನೀತ್ ರಾಜ್‍ಕುಮಾರ್ ಬಿಟ್ಟು ಹೋಗಿರುವ ಕೊನೆಯ ಕಥೆ ಗಂಧದಗುಡಿ.ಈ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಅವರು ಅನೇಕ ಸಂದೇಶಗಳನ್ನು ನೀಡಿದ್ದಾರೆ. ಅಭಿಮಾನಿಗಳಿಗೆ ಅಂತಲೇ ಮಾಡಿರುವ ಸಿನಿಮಾ ಇದಾಗಿದ್ದು,ಚಿತ್ರ ನೋಡಿ ಅಭಿಮಾನಿಗಳು ಹಾರೈಸಬೇಕೆಂದು ಕೋರಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!