Wednesday, September 18, 2024

ಪ್ರಾಯೋಗಿಕ ಆವೃತ್ತಿ

ನಿಡಘಟ್ಟ ಗ್ರಾ.ಪಂ.ಅಧ್ಯಕ್ಷರಾಗಿ ಜ್ಯೋತಿ ಮಹದೇವಸ್ವಾಮಿ ಆಯ್ಕೆ

ಮಳವಳ್ಳಿ ತಾಲ್ಲೂಕು ನಿಡಘಟ್ಟ ಗ್ರಾಮ ಪಂ‍ಚಾಯಿತಿ ನೂತನ ಅಧ್ಯಕ್ಷರಾಗಿ ಜ್ಯೋತಿ ಮಹದೇವಸ್ವಾಮಿ ಅವಿರೋಧ ಆಯ್ಕೆಯಾದರು.

ಈ ಹಿಂದೆ ಇದ್ದ ಅಧ್ಯಕ್ಷೆ ಸೌಮ್ಯ ಸತೀಶ್ ರಾಜೀನಾಮೆಯಿಂದ ತೆರವಾದ ಅಧ್ಯಕ್ಷರ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಿಗಧಿಯಾಗಿತ್ತು. 14 ಮಂದಿ ಸದಸ್ಯರ ಪೈಕಿ ಗೌಡಗೆರೆ ಗ್ರಾಮದ ಜ್ಯೋತಿ ಮಹದೇವಸ್ವಾಮಿ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ರಾಮಲಿಂಗಯ್ಯ ಅವರು ಜ್ಯೋತಿ ಮಹದೇವಸ್ವಾಮಿ  ಅವರು ಅವಿರೋಧ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

ನೂತನ ಅಧ್ಯಕ್ಷೆ ಜ್ಯೋತಿ ಮಾತನಾಡಿ, ಎಲ್ಲಾ ಸದಸ್ಯರ ವಿಶ್ವಾಸಗಳಿಸಿ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಅಧ್ಯಕ್ಷೆ ಜ್ಯೋತಿ ಮಹದೇವಸ್ವಾಮಿ ಅವರನ್ನು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!