ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿ ಮಂಡ್ಯನಗರಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಂಡ್ಯ ನಗರದ ಕಾಳಿಕಾಂಬ ದೇವಾಲಯದಲ್ಲಿ ಜಿಲ್ಲಾ ಜೆಡಿಎಸ್ ಆಯೋಜಿಸಿದ್ದ ರಾಜ್ಯ ಯುವಘಟಕದ ಅಧ್ಯಕ್ಷ ನಿಖಿಲ್ಕುಮಾರ್ ಜನ್ಮದಿನ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು. ಜೆಡಿಎಸ್ ಮುಖಂಡ ಎಚ್.ಎನ್.ಯೋಗೇಶ್ ರಾಮನಗರಕ್ಕೆ ತರಳಲು ಕಾರು ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ಸ್ಯಾಂಡಲ್ವುಡ್ಗೆ ನಟ ನಿಖಿಲ್ ಕುಮಾರಸ್ವಾಮಿ ಅವರು ‘ಜಾಗ್ವಾರ್’ ಸಿನಿಮಾದ ಮೂಲಕ ಹೀರೋ ಆಗಿ ಎಂಟ್ರಿ ಕೊಟ್ಟರು.
ಆನಂತರ ಅವರು ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಸಕ್ರಿಯರಾಗಿದ್ದಾರೆ. ಇದೀಗ ಅವರ 35ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಹೊಸ ಹೊಸ ಸೇವಾ ಕಾರ್ಯಗಳನ್ನು ರೂಪಿಸಲು ಸಂಕಲ್ಪ ಮಾಡಿದ್ದಾರೆ, ಇಂತಹ ಯುವನಾಯಕ ಜನರ ಕಣ್ಮಣಿಯಾಗಿ ಬೆಳೆಯಲಿ ಎಂದರು.
ಕಿರುತೆರೆ ನಾಯಕ ನಟ ವಿಶಾಲ್ರಘು ಮಾತನಾಡಿ, ಸ್ಯಾಂಡಲ್ವುಡ್ ಯುವರಾಜ ಎಂದೇ ಅಭಿಮಾನಿಗಳ ಗೌರವಕ್ಕೆ ಪಾತ್ರರಾಗಿರುವ ನಾಯಕನಟ ನಿಖಿಲ್ ಕುಮಾರಸ್ವಾಮಿ ಅವರ ಜನ್ಮದಿನವಾದ ಇಂದು ನಾವು ಆಯುರಾರೋಗ್ಯ, ರಾಜಕೀಯಭವಿಷ್ಯ ಉಜ್ವಲಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ನಗರಸಭಾ ಸದಸ್ಯ ನಾಗೇಶ್, ಕುಮಾರ್, ಹೊಸಹಳ್ಳಿ ಚನ್ನಪ್ಪ, ರಮೇಶ್, ಪುಟ್ಟಸ್ವಾಮಿ, ಮೊಹನ್ಕುಮಾರ್, ಮನೋಜ್, ಶಶಿಕುಮಾರ್ ಮತ್ತಿತರರಿದ್ದರು.