ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ( ಮನ್ ಮುಲ್ )ದ ನಿರ್ದೇಶಕರಾಗಿ ಕದಲೂರು ರಾಮಕೃಷ್ಣ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ.
ಮಂಡ್ಯ,ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಕದಲೂರು ರಾಮಕೃಷ್ಣ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಿ, ಈ ಕೂಡಲೇ ಜಾರಿಗೆ ಬರುವಂತೆ ಸಹಕಾರ ಇಲಾಖೆಯ ಪದ ನಿಮಿತ್ತ ಜಂಟಿ ಕಾರ್ಯದರ್ಶಿ ಎ.ಸಿ ದಿವಾಕರ್ ಆದೇಶಿಸಿದ್ದಾರೆ.