Sunday, May 5, 2024

ಪ್ರಾಯೋಗಿಕ ಆವೃತ್ತಿ

ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯಯುತವಾಗಿರಿ

ಅಕ್ಷಯ ಪಾತ್ರೆ ಫೌಂಡೇಶನ್ ವತಿಯಿಂದ ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಲ್ಲಿ ಪೌಷ್ಟಿಕತೆ ಹೆಚ್ಚಿಸಲು ಒಂದು ಸಾವಿರ ಪೌಷ್ಟಿಕ ಆಹಾರ ಕಿಟ್ ನೀಡಲಾಗಿದ್ದು,ಪೌಷ್ಟಿಕ ಆಹಾರ ಸೇವಿಸಿ ಆರೋಗ್ಯಯುತವಾಗಿರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಎಸ್.ರಾಜಮೂರ್ತಿ ಅವರು ತಿಳಿಸಿದರು.

ಮಂಡ್ಯ ನಗರದ ಜಿಲ್ಲಾ ಬಾಲ ಭವನದಲ್ಲಿ ಅಕ್ಷಯ ಪಾತ್ರೆ ಫೌಂಡೇಶನ್ ವತಿಯಿಂದ ಆಯೋಜಿಸಿದ ಗರ್ಭಿಣಿ ಮತ್ತು ಬಾಣಂತಿಯರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಂಡ್ಯ ಮತ್ತ ದುದ್ದ ವ್ಯಾಪ್ತಿಗೆ 200 ಆಹಾರ ಕಿಟ್ ಗಳನ್ನು ವಿತರಿಸಲಾಗಿದೆ.ಉಳಿದ ಆಹಾರ ಕಿಟ್ ಗಳನ್ನು ಜಿಲ್ಲೆಯ ಇನ್ನಿತರ ತಾಲ್ಲೂಕುಗಳಲ್ಲಿ ವಿತರಿಸಲಾಗುವುದು ಎಂದರು.

ಗರ್ಭಿಣಿ ಮತ್ತು ಬಾಣಂತಿಯರು ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ತಪ್ಪಿಸಲು ಹಾಗೂ ಮಗು ಆರೋಗ್ಯವಾಗಿರಲು ಈ ಆಹಾರ ಕಿಟ್ ಗಳನ್ನು ನೀಡಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಅಕ್ಷಯ ಪಾತ್ರೆ ಫೌಂಡೇಶನ್ ವ್ಯವಸ್ಥಾಪಕರಾದ ಸುಕೇಶ್, ನಿರೂಪಣಾಧಿಕಾರಿ ಚೇತನ್ ಕುಮಾರ್, ಸಿಡಿಪಿಒ ಗಳಾದ ಯೋಗೇಶ್, ಕುಮಾರ ಸ್ವಾಮಿ, ಕೋಮಲ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!