ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಂಡ್ಯ ಲೋಕಸಭಾ ಕ್ಷೇತ್ರದ ಘೋಷಿತ ಅಭ್ಯರ್ಥಿ ಸ್ಟಾರ್ ಚಂದ್ರು ನಗರದ ಕಲ್ಲಹಳ್ಳಿಯಲ್ಲಿ ಅಧಿಕೃತ ಕಚೇರಿ ಉದ್ಘಾಟಿಸಿ, ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪಕ್ಷದ ಒಮ್ಮತದ ಅಭ್ಯರ್ಥಿಯಾಗಿ ರಾಷ್ಟ್ರ ಹಾಗೂ ರಾಜ್ಯದ ನಾಯಕರು ನನ್ನನ್ನು ಆಯ್ಕೆ ಮಾಡಿದ್ದು, ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಈಗಾಗಲೇ ಜಿಲ್ಲಾದ್ಯಂತ ಪ್ರವಾಸ ನಡೆಸಿದ್ದು, ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ಸಿಯಾಗುತ್ತೇನೆಂಬ ಭರವಸೆ ಇದೆ ಎಂದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಜಿಲ್ಲೆಯ ಅಭ್ಯುದಯಕ್ಕಾಗಿ ಉತ್ತಮ ಯೋಜನೆಗಳನ್ನು ಸಾಕಾರಗೊಳಿಸಲು ರಾಜ್ಯದ ಆಯ-ವ್ಯಯ ಪೂರಕವಾಗಿದ್ದು, ಜಿಲ್ಲೆಯ ಜನರ ಸಹಕಾರ ಅಗತ್ಯವಾಗಿದ್ದು, ಅಭ್ಯರ್ಥಿ ಗೆಲುವಿಗೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು.