ಒಕ್ಕಲಿಗ ಸಮುದಾಯಕ್ಕೆ 2ಸಿ ಪ್ರವರ್ಗ ಸೃಷ್ಠಿಸುವ ಮೂಲಕ ರಾಜ್ಯ ಸರ್ಕಾರ ಒಕ್ಕಲಿಗನ್ನು ಓಲೈಸುವ ಕಾರ್ಯಕ್ರಮಕ್ಕೆ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ರಾಜ್ಯ ಜಂಟಿ ಕಾರ್ಯದರ್ಶಿ ಸಿ.ಆರ್.ರಮೇಶ್ ಹೇಳಿದರು.
ಪಾಂಡವಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ ನೀಡಿದೆ. ಇದು ರಾಜ್ಯ ಸರ್ಕಾರಕ್ಕೆ ಒಂದು ರೀತಿಯ ಪಾಠವಾಗಿದೆ. ಇನ್ನೂ ಮುಂದಾದರೂ ಬಿಜೆಪಿ ಸರ್ಕಾರ ಜಾತಿ- ಜಾತಿಗಳ ನಡುವೆ ಸಂಘರ್ಷಕ್ಕೆ ಮುಂದಾಗಿರುವುದನ್ನು ನಿಲ್ಲಿಸಬೇಕು ಎಂದರು.
ರಾಜ್ಯ ಸರ್ಕಾರದ ಈ ಭರವಸೆಗೆ ಮರುಳಾಗದೆ ಪಕ್ಷಭೇದ ಮರೆತು ಒಕ್ಕಲಿಗರ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಜನಾಂಗದ ಉಳಿವಿಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಶೀಘ್ರ ಸಭೆ ಕರೆದು ಹೋರಾಟಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಮುಖಂಡರಾದ ಹಾರೋಹಳ್ಳಿ ಧನ್ಯಕುಮಾರ್,ಕೋ.ಪು.ಗುಣಶೇಖರ್, ಎನ್.ಕೃಷ್ಣೇಗೌಡ ಇತರರಿದ್ದರು.