Thursday, September 19, 2024

ಪ್ರಾಯೋಗಿಕ ಆವೃತ್ತಿ

ಒಕ್ಕಲಿಗ ನಾಯಕರ ಕಡೆಗಣೆನೆ ಸರಿಯಲ್ಲ

ನಾಡಪ್ರಭು ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ನಾಡಿನಾದ್ಯಂತ ಪವಿತ್ರ ಮೃತ್ತಿಕೆ ಸಂಗ್ರಹಣಾ ವಾಹನದಲ್ಲಿ ಒಕ್ಕಲಿಗ ನಾಯಕರ ಭಾವಚಿತ್ರ ಹಾಕದೆ ಕಡೆಗಣಿಸಿರುವುದು ಸರಿಯಲ್ಲ. ಕೂಡಲೇ ಇವರ ಭಾವಚಿತ್ರ ಹಾಕಬೇಕೆಂದು ಆಗ್ರಹಿಸಿ ಮದ್ದೂರು ಪಟ್ಟಣದಲ್ಲಿ ಒಕ್ಕಲಿಗ ಸಮುದಾಯದ ಪ್ರಮುಖರು ತಾಲೂಕು ದಂಡಾಧಿಕಾರಿ ನರಸಿಂಹಮೂರ್ತಿಯವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮದ್ದೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಆರ್.ಪ್ರಸನ್ನ ಕುಮಾರ್, ಈ ವಾಹನದಲ್ಲಿ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರುಗಳಾದ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ, ಮಾಜಿ ಸಚಿವ ಡಿ.ಕೆ.ಶಿವಕುಮಾರ್, ಹೆಚ್.ಡಿ.ಕುಮಾರಸ್ವಾಮಿ, ಹಾಲಿ ಸಚಿವರಾದ ಆರ್. ಅಶೋಕ್ ಸೇರಿದಂತೆ ಒಕ್ಕಲಿಗ ಸಮುದಾಯದ ಯಾರೊಬ್ಬರ ಭಾವಚಿತ್ರವನ್ನು ವಾಹನದಲ್ಲಿ ಹಾಕದೆ ಇರುವುದು ಖಂಡನೀಯ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಸುರೇಶ್ ಕುಮಾರ್, ಪುರಸಭೆ ಉಪಾಧ್ಯಕ್ಷರಾದ ಸುಮಿತ್ರ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಮಹೇಶ್ ಹಾಗೂ ಸದಸ್ಯರಾದ ಎಂ. ಐ. ಪ್ರವೀಣ್, ಬಸವರಾಜು ಮತ್ತು ಜಿಲ್ಲಾ ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ನವೀನ್ ಕುಮಾರ್, ರಾಮು, ರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!