Thursday, September 19, 2024

ಪ್ರಾಯೋಗಿಕ ಆವೃತ್ತಿ

ನ.20ಕ್ಕೆ ದಕ್ಷೋತ್ಸವ -ಸಾಂಸ್ಕೃತಿಕ ಕಾರ್ಯಕ್ರಮ

ದಕ್ಷ ಸಮಾಜಮುಖಿ ಟ್ರಸ್ಟ್ ವತಿಯಿಂದ ಮಂಡ್ಯನಗರದ ಗುತ್ತಲು ರಸ್ತೆಯ ಕುವೆಂಪು ಮೈದಾನದಲ್ಲಿ ನ.20ರಂದು “ದಕೋತ್ಸವ” ಎಂಬ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಟ್ರಸ್ಟ್ ನ ಮುಖ್ಯಸ್ಥ ಜಯಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನೂರಾರು ಕಲಾವಿದರಿಂದ ಬೃಹತ್  ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಇದರ ಜೊತೆಗೆ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ, ದಕ್ಷ ಪುರಸ್ಕಾರ ನೀಡಿ ಗೌರವಿಸಲಾಗುವುದು.  ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಲಿಟಲ್ ರಾಜ-ರಾಣಿ ಪ್ಯಾಶನ್ ಶೋ ಜರುಗಲಿದೆ ಎಂದರು.

ಗೋಷ್ಠಿಯಲ್ಲಿ ಟ್ರಸ್ಟ್ ನ ಶಶಿಕಿರಣ್ ಹಾಗೂ ಜಗದೀಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!