Thursday, September 19, 2024

ಪ್ರಾಯೋಗಿಕ ಆವೃತ್ತಿ

ನ.26ಕ್ಕೆ ಕನ್ನಡ ಹಬ್ಬ: ಆರೋಗ್ಯ ತಪಾಸಣಾ ಶಿಬಿರ

ಮಂಡ್ಯ ತಾಲ್ಲೂಕಿನ ಪಣಕನಹಳ್ಳಿ ಗ್ರಾಮದ ಭೈರವೇಶ್ವರ ಯುವಕರ ಸಂಘದ ವತಿಯಿಂದ ನ.26ರಂದು ಬೆಳಿಗ್ಗೆ 8 ಗಂಟೆಗೆ ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದ ಆವರಣಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಗ್ರಾಮದ ಸಂಘದ ಮುಖಂಡ ದಿವಾಕರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಶಿಬಿರದಲ್ಲಿ ಡಾ.ಆಶಾಲತಾ, ಡಾ.ಶೋಭಾ, ಡಾ.ರವಿಕುಮಾರ್, ಡಾ.ಅರವಿಂದ್, ಡಾ.ಅರುಣ್ ಪಿ.ಎಸ್. ಡಾ.ಅರುಣ್ ಎಸ್, ಹಾಗೂ ಭಾನುಜ ಎಂಬ ವೈದ್ಯರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಆದ್ದರಿಂದ ಪಣಕನಹಳ್ಳಿ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರು ಇದರ ಸದುಪಯೋಗಪಡೆದುಕೊಳ್ಳಬೇಕೆಂದರು.

ರಾತ್ರಿ 7 ಗಂಟೆ ವಿವಿಧ ಗಾಯಕರಿಂದ ಹಾಗೂ ನೃತ್ಯತಂಡಗಳಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದರು.

ಗೋಷ್ಠಿಯಲ್ಲಿ ಮುಖಂಡರಾದ ರವಿ, ಶಶಿಕುಮಾರ್ ಹಾಗೂ ಮಹೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!