ನವೆಂಬರ್ 26ರ ಸಂವಿಧಾನ ದಿನಾಚರಣೆಯ ಅಂಗವಾಗಿ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಏಕಕಾಲಕ್ಕೆ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಸಂವಿಧಾನದ ಪೀಠಿಕೆ, ಮೂಲಭೂತ ಕರ್ತವ್ಯಗಳ ಪ್ರದರ್ಶನ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವಂತೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸೂಚನೆ ನೀಡಿದ್ದಾರೆ.
ಭಾರತದ ಸಂವಿಧಾನ ಸಭೆಯಲ್ಲಿ ಸಂವಿಧಾನ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ ಅನ್ನು ಸಂವಿಧಾನ ದಿನಾಚರಣೆ ಆಚರಿಸಲಾಗುತ್ತಿದೆ.
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ