ಕಾವೇರಿ ನದಿ ನೀರು ಹಂಚಿಕೆಯಲ್ಲಿ ಮತ್ತೆ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಮಂಗಳವಾರ ದೆಹಲಿಯಲ್ಲಿ ಸಭೆ ಸೇರಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯು 18 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸ್ಸು ಮಾಡಿದೆ. ಅಂದರೆ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದಿಂದ ಕಾವೇರಿ ಬರಿದಾಗಲಿದೆ. ಇವತ್ತಿನ ಆದೇಶದಿಂದ ಜಲಾಶಯವೇ ಖಾಲಿಯಾಗುವ ಆತಂಕ ಎದುರಾಗುವ ಅಪಾಯವಿದೆ.
ಕಾವೇರಿ ನದಿ ನೀರು ನಿಯಂತ್ರ ಮಂಡಳಿ ಆದೇಶವನ್ನು ಪ್ರಶ್ನಿಸಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ಆದರೆ ಈಗಾಗಲೇ ಕರ್ನಾಟಕದ ಎಲ್ಲಾ ವಾದಗಳಿಗೂ ಹಿನ್ನಡೆಯಾಗಿದೆ. ಹಾಗಾಗಿ ಸರ್ಕಾರ ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತದೋ ಕಾದು ನೋಡಬೇಕಾಗಿದೆ.