ಮಂಡ್ಯ ತಾಲೂಕು ಭೂತನಹೊಸೂರು ಗ್ರಾಮದ ಪಿ.ಮಾನಸ ಮನುಮೋಹನ್ ಅವರು ಬೆಂಗಳೂರಿನ ವಿವೇಕಾನಂದ ತಾಂತ್ರಿಕ ಕಾಲೇಜಿನ ಪ್ರಾಧ್ಯಾಪಕಿ ಡಾ.ಕೆ.ಶೈಲಾ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ವೈರ್ ಲೆಸ್ ಸೆನ್ಸಾರ್ ನೆಟ್ವರ್ಕ್ ” ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿ ನೀಡಿ ಗೌರವಿಸಿದೆ.
ಮಾನಸ ಅವರು ಬೆಂಗಳೂರಿನ ತಾಂತ್ರಿಕ ವಿಶ್ವವಿದ್ಯಾನಿಲಯದ E&C ವಿಭಾಗದ ಸಹ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.