ಚೀನಾದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತದಲ್ಲಿ 2-3 ಕಡೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಮಾಹಿತಿ ಗೊತ್ತಿದೆ. ನಾನು ಕೋವಿಡ್ ಬಗ್ಗೆ ಲಘುವಾಗಿ ಮಾತನಾಡಲ್ಲ. ಆದರೆ ಪಂಚರತ್ನ ರಥಯಾತ್ರೆ ಯಶಸ್ವಿಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಆರ್.ಎಸ್.ಎಸ್. ಕೇಂದ್ರ ಕಚೇರಿ ‘ಕೇಶವ ಕೃಪ’ದಲ್ಲಿ ಯಾತ್ರೆ ತಡೆಯಲು ಹುನ್ನಾರ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ಮಂಡ್ಯ ತಾಲ್ಲೂಕಿನ ಹನಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನಲೆಯಲ್ಲಿ ಸರ್ಕಾರದ ಜೊತೆ ಸಹಕಾರ ಕೊಡಲು ನಾವು ತಯಾರಿದ್ದೇವೆ. ಕೋವಿಡ್ ವಿಚಾರದಲ್ಲಿ ಲಘುವಾಗಿ ಮಾತನಾಡಲ್ಲ.ಆದರೆ ನನಗೆ ಬಂದಿರುವ ಮಾಹಿತಿ ಪ್ರಕಾರ ಪಂಚರತ್ನ ರಥಯಾತ್ರೆಗೆ ಜನರು ಹೆಚ್ಚಿನ ಪ್ರಮಾಣದಲ್ಲಿ ಸೇರುವುದನ್ನು ಕಂಡು
ರಥಯಾತ್ರೆ ನಿಲ್ಲಿಸಲು ಕೇಶವ ಕೃಪದಲ್ಲಿ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಇದೆ.ಅದಕ್ಕಾಗಿ ಕೋವಿಡ್ ಭೂತ ಬಿಟ್ಟು ಯಾತ್ರೆ ತಡೆಯಲು ಹುನ್ನಾರ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಎಂ.ಶ್ರೀನಿವಾಸ್, ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಉಪಾಧ್ಯಕ್ಷ ರಘುನಂದನ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡರಾದ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್, ಎಚ್.ಎನ್.ಯೋಗೇಶ್, ಮುದ್ದನಘಟ್ಟ ಮಹಾಲಿಂಗೇಗೌಡ ಮತ್ತಿತರರಿದ್ದರು.