ಲೋಕಸಭೆ ಹಿನ್ನೆಲೆಯಲ್ಲಿ ಮಳವಳ್ಳಿ ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಇಂದು ಪಟ್ಟಣದಲ್ಲಿ ಪ್ಯಾರಾ ಮಿಲಿಟರಿ ಮತ್ತು ಪೋಲಿಸರಿಂದ ಪಥಸಂಚನಲ ನಡೆಸಿದರು.
ಡಿವೈಎಸ್ಪಿ ಕೃಷ್ಣಪ್ಪ ಪಥ ಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಮಳವಳ್ಳಿ ತಾಲೂಕಿನ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಸೈನಿಕರ ಪಥ ಸಂಚಲನೆ ನಡೆಯಲಿದೆ. ಸಾರ್ವಜನಿಕರು ಶಾಂತಿಮ ನಿರ್ಭೀತಿಯಿಂದ ಮತದಾನ ಮಾಡಬೇಕು. ಜೊತೆಗೆ ಯಾವುದೇ ಚುನಾವಣಾ ನೀತಿ ಉಲ್ಲಂಘನೆಯ ಪ್ರಕರಣಗಳು ನಡೆದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿ ಕೊಡಬೇಕೆಂದು ಮನವಿ ಮಾಡಿದರು.
ಸುಮಾರು ನೂರಕ್ಕೂ ಅಧಿಕ ಪ್ಯಾರಾ ಮಿಲಿಟರಿ ಯೋಧರು ಪಥ ಸಂಚಲನ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್, ಪಿಎಸ್ಐ ಮಹೇಂದ್ರ, ಪೇದೆ ಹರ್ಷವರ್ದನ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.