Friday, September 20, 2024

ಪ್ರಾಯೋಗಿಕ ಆವೃತ್ತಿ

40 % ಕಮಿಷನ್ ವಿರುದ್ದ ಪೇ ಸಿಎಂ ಅಭಿಯಾನ

ಕರ್ನಾಟಕದ ಬಿಜೆಪಿ ಸರ್ಕಾರ ಶೇ.40 ಕಮಿಷನ್ ಪಡೆಯುತ್ತಿದೆ ಎಂಬ ವ್ಯಾಪಕ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷವು ಪೇ ಸಿಎಂ ಅಭಿಯಾನ ಆರಂಭಿಸಿದೆ.

“>

ರಾಜ್ಯ ಬಿಜೆಪಿ ಸರ್ಕಾರ ‘ಶೇ 40 ಕಮಿಷನ್ ಸರ್ಕಾರ’ವೆಂದು ಆರೋಪಿಸಿ ‘ಪೇ ಸಿಎಂ’ (PayCM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷ ಅಭಿಯಾನ ಆರಂಭಿಸಿದೆ.
ಬೆಂಗಳೂರು ನಗರದ ವಿವಿಧೆಡೆ ಪೇ ಸಿಎಂ (paycm) ಭಿತ್ತಿಪತ್ರಗಳನ್ನು ಕ್ಯೂ ಆರ್ ಕೋಡ್ ಸಹಿತ ಅಂಟಿಸಿ  ಅಭಿಯಾನ ಆರಂಭಿಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ.

ಈ ಮಧ್ಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ಶೇ.40 ಕಮಿಷನ್ ವಿರುದ್ಧ ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಲಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!