Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಪೇಸಿಎಂ ಏಟಿಗೆ ಬಿಜೆಪಿ ಪೇಸಿಎಸ್ ತಿರುಗೇಟು

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಪೇಸಿಎಂ ಅಭಿಯಾನ ನಡೆಸಿ ಯಶಸ್ವಿಯಾಗಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿ ಪೇಸಿಎಸ್ ಅಭಿಯಾನ ನಡೆಸುತ್ತಿದೆ.

ಸಚಿವ ಚಲುವರಾಯಸ್ವಾಮಿ ಮೇಲಿನ ಆರೋಪಕ್ಕೆ ಬಿಜೆಪಿ ವ್ಯಂಗ್ಯವಾಗಿ QR ಕೋಡ್‌ನಲ್ಲಿ ಚಲುವರಾಯಸ್ವಾಮಿ ಫೋಟೋ ಹಾಕಿ ಪೇಸಿಎಸ್ ಅಭಿಯಾನ ಆರಂಭಿಸಿದೆ.

ಬಿಜೆಪಿ ಅಧಿಕಾರದಲ್ಲಿದ್ದ ವೇಳೆ 40% ಕಮಿಷನ್ ಆರೋಪಿಸಿ ಪೇಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಪೇ‌ಸಿಎಸ್ ಅಭಿಯಾನದ ಮೂಲಕ ಬಿಜೆಪಿ ತಿರುಗೇಟು ನೀಡಿದೆ.

QR ಕೋಡ್ ಸ್ಕ್ಯಾನ್ ಮಾಡಿ ಚಲುವರಾಯಸ್ವಾಮಿ ಭ್ರಷ್ಟಾಚಾರ ಹೊರ ಬರಬಹುದು. ಯಾವುದೇ ಟ್ರಾನ್ಸ್‌ಫರ್ ಡೀಲ್‌ಗಳಿದ್ದರೆ ಪೇಸಿಎಸ್ ಮಾಡಿ, 6 ರಿಂದ 8 ಲಕ್ಷ ತೆಗೆದುಕೊಳ್ಳಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಂಗ್ಯವಾಡುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!