Saturday, October 19, 2024

ಪ್ರಾಯೋಗಿಕ ಆವೃತ್ತಿ

B.Ed ಪರೀಕ್ಷೆ ಶುಲ್ಕ ಪಾವತಿಸಲು ನೆರವಾದ ಗೃಹಲಕ್ಷ್ಮಿ ಹಣ : ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಕುಟುಂಬ ಸಾಲದ ಸುಳಿಯಲ್ಲಿದ್ದು ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ ಎಂದು ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದ ವಿದ್ಯಾರ್ಥಿಯ ಬಗ್ಗೆ ಮರು ಟ್ವೀಟ್‌ ಮಾಡಿ ಸಿಎಂ ಸಿದ್ದರಾಮಯ್ಯ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಈ ಕುರಿತು ಸುದೀರ್ಘ ಟ್ವೀಟ್‌ ಮಾಡಿರುವ ಅವರು, ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ ಎಂದಿದ್ದಾರೆ.

ಮುಂದುವರೆದು, ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ನಾನು ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು. ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ – ಕಾಳಜಿಗೆ ಧನ್ಯವಾದ ತಿಳಿಸಿದ್ದಾರೆ.

ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದಿದ್ದಾರೆ.

“>

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!