Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಾಮಾಜಿಕ ನ್ಯಾಯ ಜಾರಿಗಾಗಿ ಜನಾಗ್ರಹ ಸಮಾವೇಶ

ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನ ಅಂಗವಾಗಿ ದಲಿತ, ಶೋಷಿತ ಸಮುದಾಯದ ಅಭ್ಯುದಯಕ್ಕಾಗಿ, ಸಾಮಾಜಿಕ ನ್ಯಾಯ ಜಾರಿಗಾಗಿ ಜನಾಗ್ರಹ ಸಮಾವೇಶವನ್ನು ಮಂಡ್ಯನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಿ.11ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ವಿಚಾರವಾದಿ ಕೆ.ಎಸ್.ಭಗವಾನ್ ಉದ್ಘಾಟಿಸುವರು. ನಳಂದ ಬೌದ್ದ ವಿಹಾರದ ಬಂತೆ ಬೋಧಿ ದತ್ತ ಮಹಾತೇರ ಬುದ್ದ ವಂದನೆ ಸಲ್ಲಿಸುವರು. ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅಧ್ಯಕ್ಷತೆ ವಹಿಸುವರು. ರಾಜ್ಯ ಸಂಪನ್ಮೂಲ ಕೇಂದ್ರ ಮಾಜಿ ನಿರ್ದೇಶಕ ಡಾ.ಎಸ್.ತುಕಾರಾಂ ಪುಷ್ಪಾರ್ಚನೆ ಮಾಡುವರು ಎಂದರು.

ರಾಜ್ಯ ತರಬೇತುದಾರ ಶ್ರೀಧರ ಕಲಿವೀರ ಪ್ರಧಾನ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ರಿಪಬ್ಲಿಕ್ ಪಾರ್ಟಿ ಆಫ್ ಕರ್ನಾಟಕದ ರಾಜ್ಯಾಧ್ಯಕ್ಷ ಡಾ.ಆರ್.ಮೋಹನ್ ರಾಜ್, ವಿಚಾರವಾದಿ ಕೆ. ಮಾಯಿಗೌಡ, ಮುಖಂಡರಾದ ರಾಜಕುಮಾರ್ ಮೂಲ ಭಾರತಿ, ಶರಣು ಜಮಖಂಡಿ, ಜನಾರ್ಧನ್ ಬಾಬು, ಹೊನ್ನಪ್ಪ ಗಂಗನಾಳ ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಸೋಮಶೇಖರ್, ಅನಿಲ್ ಕುಮಾರ್, ಆನಂದ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!