Wednesday, October 23, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯನಗರ, ಗ್ರಾಮಾಂತರ ಪ್ರದೇಶದ ಹಲವೆಡೆ ವಿದ್ಯುತ್ ನಿಲುಗಡೆ

ಮಂಡ್ಯ ತಾಲ್ಲೂಕಿನ ಚಿಕ್ಕಮಂಡ್ಯ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಅ.26ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಚಿಕ್ಕಮಂಡ್ಯ ವಿದ್ಯುತ್‌ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಮಂಡ್ಯ ನಗರ ಪ್ರದೇಶಗಳಾದ ಶಂಕರಪುರ . ಜೈನ ಸ್ಟ್ರೀಟ್, ಬೀಡಿ, ಕಾಲೋನಿ, ಜಬರ್ ಸರ್ಕಲ್, ವಿವೇಕಾನಂದ ಬಡಾವಣೆ, ಮಂಡ್ಯ ಗ್ರಾಮಾಂತರ ಪ್ರದೇಶಗಳಾದ ಗೋಪಾಲಪುರ, ಚಿಕ್ಕಮಂಡ್ಯ, ಸಾತನೂರು, ಕೊಮ್ಮೇರಹಳ್ಳಿ, ಹುಲಿವಾನ, ಕೆ.ಗೌಡಗೆರೆ, ಹೆಚ್, ಮಲ್ಲಿಗೆರೆ, ಎಸ್.ಐ.ಕೋಡಿಹಳ್ಳಿ, ಹೆಚ್.ಕೋಡಿಹಳ್ಳಿ, ಸಂಪಹಳ್ಳಿ, ಗೊರವಾಲೆ, ಬಿ. ಹೊಸಹಳ್ಳಿ, ಬೀರಗೌಡನಹಳ್ಳಿ ಹಾಗೂ ಈ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯತ್ ನಿಲುಗಡೆಯಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಅಭಿಯಂತರ ಹೆಚ್.ಕೆ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗುವುದರಿಂದ ಗ್ರಾಹಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಅವರು ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!