Friday, September 20, 2024

ಪ್ರಾಯೋಗಿಕ ಆವೃತ್ತಿ

ಲೈಂಗಿಕ ದೌರ್ಜನ್ಯ ಪ್ರಕರಣ| ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದ ಪ್ರಜ್ವಲ್ ರೇವಣ್ಣ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಹೆಚ್.ಡಿ.ರೇವಣ್ಣಗೆ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯು ನೋಟೀಸ್ ನೀಡಿದೆ.

ಈ ಮಧ್ಯೆ ಜರ್ಮಿನಿಯಲ್ಲಿದ್ಧಾರೆನ್ನಲಾದ ಪ್ರಜ್ವಲ್ ರೇವಣ್ಣ ಟ್ವೀಟ್ ಮಾಡಿದ್ದು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ ವಿಚಾರಣೆಗೆ ಹಾಜರಾಗಳು 7 ದಿನ ಕಾಲಾವಕಾಶ ನೀಡುವಂತೆ ವಕೀಲರ ಮೂಲಕ ಮನವಿ ಮಾಡಿದ್ದಾರೆ.

ಎಸ್ಐಟಿಯು ತನಿಖೆ ಆರಂಭಿಸಿರುವ ಹಿನ್ನೆಲೆಯಲ್ಲಿ ಕೆಲವೇ ದಿನಗಳಲ್ಲಿ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

“>

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!