ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದ ಜನತೆ ಅಭೂತ ಪೂರ್ವ ಬೆಂಬಲ ನೀಡಿ ಗೆಲ್ಲಿಸಿರುವುದಕ್ಕೆ ಕನ್ನಡಿಗರನ್ನು ಅಭಿನಂದಿಸಿರುವ ಖ್ಯಾತ ಚಿತ್ರ ನಟ ಪ್ರಕಾಶ್ ರೈ ಅವರು, ‘ದ್ವೇಶ ಬೂಟಾಟಿಕೆಯನ್ನು ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು, ಬೆತ್ತಲೆಯಾದ ಚಕ್ರವರ್ತಿ ಎಂದು ಬಿಜೆಪಿ ನಾಯಕರೊಬ್ಬರ ಬಗ್ಗೆ ಟ್ವೀಟ್ ಮಾಡಿದ್ದಾರೆ.
Thank you Karnataka for Kicking OUT Hatred and Bigotry ..The Emperor is NAKED … ದ್ವೇಶ…ಬೂಟಾಟಿಕೆಯನ್ನು …ಓದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ದನ್ಯವಾದಗಳು …..ಬೆತ್ತಲೆಯಾದ ಚಕ್ರವರ್ತಿ.#justasking pic.twitter.com/pVD4GuuaQO
— Prakash Raj (@prakashraaj) May 13, 2023
“>
ಈ ಹಿಂದಿನಿಂದ ನಟ ಪ್ರಕಾಶ್ ರೈ ಬಿಜೆಪಿಯ ಕೋಮುವಾದಿ ರಾಜಕಾರಣದ ವಿರುದ್ಧ ಧ್ವನಿ ಎತ್ತಿದವರಲ್ಲಿ ಪ್ರಮುಖರಾಗಿದ್ದಾರೆ. ಜಸ್ಟ್ ಅಸ್ಕಿಂಗ್ ಅಭಿಯಾನದ ಮೂಲಕ ಬಿಜೆಪಿಯ ಬೆಲೆ ಏರಿಕೆ, ಕೋಮುವಾದಿ ರಾಜಕಾರಣ, ಧರ್ಮ ರಾಜಕಾರಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಾಯಕ ನಟ ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ರಮ್ಯಾ ಸೇರಿದಂತೆ ಹಲವರು ಪ್ರಚಾರ ನಡೆಸಿದ್ದರು.