Saturday, May 18, 2024

ಪ್ರಾಯೋಗಿಕ ಆವೃತ್ತಿ

ಮೇಲುಕೋಟೆ| ಸ್ಟಾರ್ ಚಂದ್ರು ಗೆಲುವಿಗಾಗಿ 101 ಈಡುಗಾಯಿ ಒಡೆದು ಪ್ರಾರ್ಥನೆ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿ ಎಂದು ಕಾರ್ಯಕರ್ತರು ಮೇಲುಕೋಟೆ ಚಲುವರಾಯಸ್ವಾಮಿ ದೇವಸ್ಥಾನದ ಮುಂಭಾಗ 101 ತೆಂಗಿನಕಾಯಿಗಳನ್ನು ಒಡೆದು ದೇವರಲ್ಲಿ ಪ್ರಾರ್ಥಿಸಿದರು.

ಏಪ್ರಿಲ್ 26ರಂದು ನಡೆಯುವ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಅವರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿ ಎಂದು ಪ್ರಾರ್ಥನೆ ಮಾಡಿದರು.

ಇದೇ ವೇಳೆ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಸೇರಿದಂತೆ ಹಲವರು ಚಲುವರಾಯಸ್ವಾಮಿ ದೇವರ ದರ್ಶನ ಮಾಡಿ ದೇವರ ಕೃಪೆಗೆ ಪಾತ್ರರಾದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!