Saturday, May 18, 2024

ಪ್ರಾಯೋಗಿಕ ಆವೃತ್ತಿ

ವಿಧಾನಸಭಾ ಚುನಾವಣೆಗೆ ನಾನೂ ಆಕಾಂಕ್ಷಿ : ಪ್ರೇಮಾ ಯುವರಾಜ್

ಮಂಡ್ಯ ಜಿಲ್ಲೆಯ ಯಾವುದಾದರೂ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸುತ್ತೇನೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಬಿಜೆಪಿ ಮಹಿಳಾ ಮೋರ್ಚಾ ಮಾಜಿ ಅಧ್ಯಕ್ಷೆ ಪ್ರೇಮಾ ಯುವರಾಜ್ ತಿಳಿಸಿದರು.

ಮಂಡ್ಯದ ಕಾಳಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ, ಬಿಜೆಪಿ ವಾಣಿಜ್ಯ ವಿಭಾಗದ ರಾಯಭಾರಿಯಾಗಿ ಕೂಡ ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ. ದೇಶದ ಹಳ್ಳಿ ಹಳ್ಳಿಗಳಲ್ಲಿ ಕಮಲ ಅರಳಿದೆ‌.ಕೃಷಿ, ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದ್ದು, ದೇಶದ ಆರ್ಥಿಕತೆ ಸುಭದ್ರವಾಗಿ ನಿಲ್ಲಲು ನರೇಂದ್ರ ಮೋದಿಯವರ ಸರ್ಕಾರ ಶ್ರಮಿಸಿದೆ ಎಂದರು.

ಹಿಂದೆ ಆಡಳಿತ ಮಾಡಿದ್ದ ಸರ್ಕಾರಗಳು ಮತ್ತು ಈಗ ಆಡಳಿತ ಮಾಡುತ್ತಿರುವ ಬಿಜೆಪಿ ಸರ್ಕಾರವನ್ನು ಹೋಲಿಕೆ ಮಾಡಿ ನೋಡಿದರೆ, ಜನರಿಗೆ ಯಾವ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂಬುದು ತಿಳಿಯುತ್ತದೆ. ನರೇಂದ್ರ ಮೋದಿಯವರು ಕೈಗಾರಿಕೆ ಮತ್ತು ವ್ಯವಸಾಯ ಕ್ಷೇತ್ರದಲ್ಲಿ ತುಂಬಾ ಉತ್ತಮವಾಗಿ ಕೆಲಸ ಮಾಡಿ,ದೇಶವನ್ನು ನಂಬರ್ ಒನ್ ಸ್ಥಾನಕ್ಕೆ ತಂದಿದ್ದಾರೆ. ನರೇಂದ್ರ ಮೋದಿಯವರಿಗೆ ಜನರ ಹಾರೈಕೆ ಇದೆ ಎಂದರು.

ಬಿಜೆಪಿ ಸರ್ಕಾರದ ಸಾಧನೆ ಸಾಕಷ್ಟು ಖುಷಿ ತಂದಿದೆ. ನಾನು ಕೂಡ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷ ಜಿಲ್ಲೆಯ ಯಾವುದಾದರೂ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ.ಟಿಕೆಟ್ ನೀಡದಿದ್ದರೆ ಪಕ್ಷದಲ್ಲಿದ್ದುಕೊಂಡು ಅಭ್ಯರ್ಥಿಗಳ ಪರ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸುರೇಶ್, ಹನುಮಂತು, ಕೃಷ್ಣ, ಪ್ರಸನ್ನ ಗೌಡ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!