ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಮೂರು ದಿನಗಳಾಗಿವೆ. ಆದರೆ, ಬಿಜೆಪಿ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಎಲ್ಲಿಯೂ ವಿಜಯೇಂದ್ರ ಫೋಟೋಗಳು ಕಾಣಿಸುತ್ತಿಲ್ಲ. ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, ‘ವಿಜಯೇಂದ್ರ ಆಯ್ಕೆ ಸಂತೋಷ ಕೂಟಕ್ಕೆ ಅಸಹನೆ ತಂದಿದೆ’ ಎಂದು ಹೇಳಿದೆ.
ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ.
ಅದೇ ಸಂತೋಷ ಕೂಟದ ಭಾಗವಾಗಿರುವ @BJP4Karnataka ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ, ಪದಗ್ರಹಣವೂ ಆಗಿದೆ, ಆದರೆ… pic.twitter.com/F23XXwHHuM
— Karnataka Congress (@INCKarnataka) November 15, 2023
“>
ಬಿಜೆಪಿ ವಿರುದ್ಧ ಟ್ವೀಟರ್ನಲ್ಲಿ ವ್ಯಂಗ್ಯವಾಡಿರುವ ಕಾಂಗ್ರೆಸ್, “ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ಬಿಜೆಪಿ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಕುಟುಕಿದೆ.
“ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ. ಪದಗ್ರಹಣವೂ ಆಗಿದೆ. ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ!” ಎಂದಿದೆ.
“ಬಿಜೆಪಿ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ವಿಜಯೇಂದ್ರ ಕೇವಲ ಬಿಎಸ್ವೈ ಬಣಕ್ಕೆ ಮಾತ್ರ ಅಧ್ಯಕ್ಷರೇ” ಎಂದು ಪ್ರಶ್ನಿಸಿದೆ.