Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್‌ 6ನೇ ಗ್ಯಾರೆಂಟಿ | PSI – ಬಿಟ್‌ಕಾಯಿನ್ ಹಗರಣಗಳಿಗೆ ತಾರ್ಕಿಕ ಅಂತ್ಯ : ಪ್ರಿಯಾಂಕ್ ಖರ್ಗೆ

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟಂತಹ ಐದು ಗ್ಯಾರಂಟಿಗಳ ಘೋಷಣೆಯಿಂದ ಭರ್ಜರಿ ಗೆಲುವು ದಾಖಲಿಸಿದೆ. ”ಐದು ಗ್ಯಾರೆಂಟಿಗಳು ಪ್ರಮುಖವಾಗಿದದ್ದು, ಈಗ ಸರ್ಕಾರ ರಚನೆಯ ಬಳಿಕ ಪಿಎಸ್‌ಐ ಹಾಗೂ ಬಿಟ್‌ ಕಾಯಿನ್‌ ಹಗರಣಗಳಿಗೆ ತಾರ್ಕಿಕ ಅಂತ್ಯದೆಡೆಗೆ ತೆಗೆದುಕೊಂಡು ಹೋಗುವುದೇ ನಮ್ಮ ಆರನೇ ಗ್ಯಾರಂಟಿ” ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ”ಬಿಜೆಪಿ ಸರ್ಕಾರದ ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ವೇಳೆ ಐದು ಗ್ಯಾರೆಂಟಿಗಳಿ ಶರತ್ತು ವಿಧಿಸಿರುವ ಬಗ್ಗೆಮಾಧ್ಯಮದವರು  ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ”ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. ಯಾವುದೇ ಸರ್ಕಾರ ಯೋಜನೆಗಳನ್ನ ಜಾರಿಗೊಳಿಸಿದರೇ ಷರತ್ತುಗಳಿಲ್ಲದೆ ಜಾರಿಗೊಳಿಸಲು ಸಾಧ್ಯವಾ?” ಎಂದು ಪ್ರಶ್ನಿಸಿದ್ದಾರೆ.

”ಕೇಂದ್ರ ಸರ್ಕಾರದ ಯೋಜನೆಗಳಿರಲಿ ಅಥವಾ ರಾಜ್ಯ ಸರ್ಕಾರದ ಯೋಜನೆಗಳಿರಲಿ ಷರತ್ತುಗಳು ಅನ್ವಯಿಸಲಿವೆ. ಬಡವರಿಗೆ ಅನುಕೂಲ ಮಾಡಿಕೊಡಲು ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟಟ್‌ನಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಆದೇಶ ಆಗಬಹುದು” ಎಂದು ಹೇಳಿದ್ದಾರೆ.

”ಚಿತ್ತಾಪುರದಿಂದ ಮೂರು ಬಾರಿ ಗೆದ್ದಿದ್ದೇನೆ. ನನ್ನನ್ನು ಸೋಲಿಸಲು ಅನೇಕ ರೀತಿಯಲ್ಲಿ ಬಿಜೆಪಿ ಪ್ರಯತ್ನ ಮಾಡಿತ್ತು. ಆದರೆ, ನನ್ನ ಕ್ಷೇತ್ರದ ಜನ ನನ್ನ ಕೈ ಬಿಡಲಿಲ್ಲ. ನನ್ನ ವಿರುದ್ಧ ಪ್ರಚಾರಕ್ಕೆಂದು ಬಿಜೆಪಿಯ ಘಟಾನುಘಟಿ ನಾಯಕರು ಬಂದಿದ್ದರು. ಆದರೂ ನನಗೇ ಗೆಲುವಾಗಿದ್ದು ಈಗ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಎಲ್ಲ ನಾಯಕರನ್ನು ಅಭಿನಂದಿಸುತ್ತೇನೆ” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ. ಕಳೆದ ಅವಧಿಯ ಬಿಜೆಪಿ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನರ ಮುಂದೆ ಇಟ್ಟು ಸರ್ಕಾರದ ಅವ್ಯವಹಾರವನ್ನು ಹೊರಗೆಳಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅವಕಾಶವನ್ನ ಮಾಡಿಕೊಡಬಾರದು ಎಂದು ಕಾಂಗೆಸ್‌ ಸರ್ಕಾರವು ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು.

ಪಿಎಸ್‌ಐ ಹಗರಣ

ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ ಹಗರಣ ಬೆಳಕಿಗೆ ಬಂದಿತು. 2021ರ ಅಕ್ಟೋಬರ್‌ನಲ್ಲಿ ನಡೆದ 545 ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಕೆಲ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅಕ್ರಮವೆಸಗಲಾಗಿತ್ತು. ಕೇವಲ 21 ಪ್ರಶ್ನೆಗಳಿಗೆ ಉತ್ತರ ಬರೆದವರಿಗೆ 100 ಅಂಕ ನೀಡಲಾಗಿತ್ತು. ಖಾಲಿ ಬಿಟ್ಟ ಓಎಂಆರ್ ಶೀಟ್‌ಅನ್ನು ಪರೀಕ್ಷೆ ಮುಗಿದ ಬಳಿಕ ತುಂಬಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಕಲಬುರಗಿಯ ಬಿಜೆಪಿ ನಾಯಕಿಯಾಗಿದ್ದು ಅವರನ್ನು ಬಂಧಿಸಲಾಗಿತ್ತು. ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಗೌಡರೊಂದಿಗೆ ಇರುವ ಫೋಟೊಗಳು ವೈರಲ್ ಆಗಿದ್ದವು. ಆದರೆ ಇದರ ತನಿಖೆಯು ತಾರ್ಕಿಕ ಅಂತ್ಯ ಕಂಡಿಲ್ಲ.

ಬಿಟ್ ಕಾಯಿನ್ ಹಗರಣ

ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ಮೂರೇ ತಿಂಗಳಿನಲ್ಲಿ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಅವರ ಹೆಸರು ಕೇಳಿಬಂದಿತ್ತು. ‘ಕಾಂಗ್ರೆಸ್‌ನವರು ಇದರಲ್ಲಿ ಇದ್ದಾರೆ ಎಚ್ಚರಿಕೆ’ ಎಂಬ ಹೇಳಿಕೆಗಳನ್ನು ಅವರು ನೀಡಿದರೇ ಹೊರತು ನಿಷ್ಪಕ್ಷಪಾತ ತನಿಖೆಗೆ ಮುಂದಾಗಲಿಲ್ಲ. ಆನಂತರ ಶ್ರೀಕಿ ಎಂಬ ಹ್ಯಾಕರ್‌ನನ್ನು ಬಂಧಿಸಲಾಯಿತು. ಡ್ರಗ್ಸ್ ಜಾಲ ಎಂದು ಕರೆಯಲಾಯಿತಾದರೂ, ಬಿಜೆಪಿಯವರೆ ಈ ಬಿಟ್ ಕಾಯಿನ್ ಹಗರಣ ಮಾಹಿತಿಯನ್ನು ಹೊರಹಾಕಿದ್ದರು. ಆದರೆ ಅದರ ತನಿಖೆ ಮಾತ್ರ ಸರಿಯಾದ ರೀತಿಯಲ್ಲಿ ನಡೆಸಲಿಲ್ಲ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!