Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿರೋಧಿಗಳಾದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ!- ಪ್ರಿಯಾಂಕ್ ಖರ್ಗೆ

ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮರುಕ ವ್ಯಕ್ತಪಡಿಸಿದ್ದಾರೆ.

“>

ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ “ವಿರೋಧ ಪಕ್ಷದ ನಾಯಕ”ನ ಆಯ್ಕೆ ಸಾಧ್ಯವಾಗುವುದೇ? “ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ” ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು
ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!