ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಂಡ್ಯ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಅ.22ರಂದು ಬೆಳಿಗ್ಗೆ 10.30ಕ್ಕೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಡುವ ಸಚಿವರು, 10.30 ಗಂಟೆಗೆ ಮಂಡ್ಯದ ಪ್ರಗತಿ ಪರಿಶೀಲನಾ ಸಭೆ ಭಾಗವಹಿಸಿ, ಮಧ್ಯಾಹ್ನ 3 ಗಂಟೆಗೆ ಮಂಡ್ಯದಿಂದ ನಿರ್ಗಮಿಸಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ರವಿ ಎಂ.ತಿರ್ಲಪೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.