Thursday, September 19, 2024

ಪ್ರಾಯೋಗಿಕ ಆವೃತ್ತಿ

ಜಿಹಾದಿ ಸಂಘಟನೆಗಳ ನಿಷೇಧಕ್ಕೆ ಆಗ್ರಹ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಗೆ ಜಿಹಾದಿ ಸಂಘಟನೆಗಳಾದ ಎಸ್ಡಿಪಿಐ ಹಾಗೂ ಪಿಎಫ್ಐ ಕಾರಣವಾಗಿದ್ದು,ಸರ್ಕಾರ ಕೂಡಲೇ ಈ ಎರಡು ಸಂಘಟನೆಗಳನ್ನು ನಿಷೇಧಿಸುವಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಮತ್ತು ದೇಶದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಈ ಸರಣಿ ಕೊಲೆಗಳೆಲ್ಲ ಒಂದೇ ರೀತಿಯಲ್ಲಿ ನಡೆಯುತ್ತಿದೆ. ಈ ಕೊಲೆಗಳನ್ನು ನೋಡುತ್ತಿದ್ದರೆ ಜೆಹಾದಿ ಮನಸ್ಥಿತಿ ಇರತಕ್ಕಂತಹ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳ ಕೈವಾಡವಿರುವುದು ಸತ್ಯ. ಕೂಡಲೇ ಈ ಜಿಹಾದಿಗಳ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಹಿಂದಿರುವ ಆರೋಪಿಗಳನ್ನು ಬಂಧಿಸಿ ನೇರ ಗಲ್ಲಿಗೇರಿಸುವ ಮುಖಾಂತರ ಈ ಜಿಹಾದಿಗಳಿಗೆ ತಕ್ಕ ಉತ್ತರವನ್ನು ಸರ್ಕಾರ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ನಿಷೇಧಿಸಲು ಆಗ್ರಹಿಸಿದ ಮನವಿ ಪತ್ರವನ್ನ ಜಿಲ್ಲಾಧಿಕಾರಿ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.

ಬಿಜೆಪಿ ಮುಖಂಡರಾದ ಹೊಸಹಳ್ಳಿ ನಾಗೇಶ್,ಅಶೋಕ್, ಪ.ಲಿ.ಕೃಷ್ಣ,ಚಾಮರಾಜು,ಬಿಜೆಪಿ ನಗರ ಅಧ್ಯಕ್ಷ ವಿವೇಕ್,ಹರ್ಷ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!