Friday, September 20, 2024

ಪ್ರಾಯೋಗಿಕ ಆವೃತ್ತಿ

ಮುಸ್ಲಿಂ ಸಮುದಾಯಕ್ಕೆ ಅಪಮಾನ ಆರೋಪ : ಪ್ರತಿಭಟನೆ

ಮುಸ್ಲಿಂ ಸಮುದಾಯವನ್ನು ಅವಮಾನಿಸಲಾಗಿದ್ದು, ಆರ್ ಟಿಐ ಕಾರ್ಯಕರ್ತ ಕೆ.ಆರ್.ರವೀಂದ್ರ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೆಲ ಸಂಘಟನೆಗಳ ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಸೋಮವಾರ ಬೆಳಗ್ಗೆ ಮುಸ್ಲಿಂ ಸಮುದಾಯದ ಜಬೀವುಲ್ಲಾ, ದಸಂಸ ಮುಖಂಡ ಎಂ.ವಿ.ಕೃಷ್ಣ ಸೇರಿದಂತೆ ವಿವಿಧ ಪ್ರಗತಿಪರರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಮಾವೇಶಗೊಂಡು ರವೀಂದ್ರ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ಹೊರಹಾಕಿದರು.

ಚುನಾವಣೆ ಎದುರಾಗುತ್ತಿರುವ ಸಂದರ್ಭದಲ್ಲಿಯೇ ಜಾತಿ ವಿಚಾರ ಎತ್ತಿ ಸಮಾಜದಲ್ಲಿನ ಸಾಮರಸ್ಯವನ್ನು ಹಾಳು ಮಾಡಲು ಕೆಲವರು ಮುಂದಾಗಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತಲು ಹೊರಟಿದ್ದಾರೆ. ಇದರಿಂದ ಶಾಂತಿ, ನೆಮ್ಮದಿಗೆ ಭಂಗ ಉಂಟಾಗುತ್ತದೆ. ಆದ್ದರಿಂದ ಅವರನ್ನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಚಂದ್ರಣ್ಣ, ಎಂ.ಸಿ.ವರದರಾಜು, ಸುರೇಶ್, ಉಮೇಶ್, ರಮೇಶ್, ಮುನಿಯಪ್ಪ, ತಮ್ಮೇಗೌಡ, ನಿಂಗರಾಜು ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!