Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಯತ್ನಾಳ್ ವಿರುದ್ದ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕುರಿತು ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ದ ಪಕ್ಷದ ವರಿಷ್ಟರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾಗ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಕೇಂದ್ರ ಅಂಚೆ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಅಂಚೆ ಮೂಳಕ ಪತ್ರ ರವಾನಿಸಿದ ಪ್ರತಿಭಟನಾಕಾರರು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶಕುನಿ ಎಂದು ಟೀಕೆ ಮಾಡಿರುವ ಬಸವನ ಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ವರಿಷ್ಠರು ಸೂಕ್ತ ತಿಳುವಳಿಕೆ ಹೇಳಬೇಕು, ಇಲ್ಲದಿದ್ದರೆ ಯತ್ನಾಳ್ ಅವರನ್ನು  ಸರಿದಾರಿಗೆ ತರಲು ಯಡಿಯೂರಪ್ಪರ ಅನುಯಾಯಿಗಳಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಯತ್ನಾಳ್ ವರ್ತನೆಯಿಂದ ಲೋಕಸಭಾ ಚುನಾವಣೆ ಮೇಲೆ ಹೊಡೆತ ಬೀಳಲಿದೆ, ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಬಿಜೆಪಿ ಮುಖಂಡರಾದ ಎಸ್. ಶಿವಕುಮಾರ್ ಆರಾಧ್ಯ, ಸಾತನೂರು ಯೋಗೇಶ್, ಎಂ.ಎಸ್ ನಂದೀಶ್, ಹೊಸಹಳ್ಳಿ ಶಿವು, ಎಚ್ ಕೆ ಮಂಜುನಾಥ್, ಸಿ.ಎಂ.ವಿಜಯಕುಮಾರ್, ಎಸ್ ಕೆ ನಾಗರಾಜು, ರೇವ ನಂಜುಂಡಸ್ವಾಮಿ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!