ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ, ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಗಣಿ ನೀರು ಸುರಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ ಕಾವೇರಿ ಜಲಾನಯನ ವ್ಯಾಪ್ತಿಯ ರೈತರು ಬೆಳೆಗೆ ನೀರಿಲ್ಲದೆ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಭತ್ತ, ರಾಗಿ, ಕಬ್ಬು ನೀರಿಲ್ಲದೆ ಒಣಗುತ್ತಿದೆ.ಅಲ್ಲದೆ ಕಾವೇರಿ ನೀರು ಪ್ರಾಧಿಕಾರ ಪ್ರತಿದಿನ 3000 ಕ್ಯೂಸೆಕ್ ನೀರನ್ನು 18 ದಿನಗಳ ಕಾಲ ತಮಿಳುನಾಡಿಗೆ ಹರಿಸುವಂತೆ ಸೂಚಿಸುವುದರಿಂದ ಬೆಳೆಗಳಿಗೆ ನೀರಿಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ತಲೆಯ ಮೇಲೆ ಸಗಣಿಯ ನೀರನ್ನು ಸುರಿದುಕೊಂಡು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಹೊಸಹಳ್ಳಿ ಶಿವು ಸಾತನೂರು ಯೋಗೇಶ್, ಎಚ್.ಕೆ. ಮಂಜುನಾಥ್ ಶಿವಣ್ಣ, ನಂಜುಂಡಸ್ವಾಮಿ, ಶಿವಲಿಂಗೇಗೌಡ ಮತ್ತಿತರರಿದ್ದರು.