ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಶ್ರೀರಂಗಪಟ್ಟಣದ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಕಷ್ಟಪಟ್ಟು ದುಡಿಯುವ ಕಾರ್ಮಿಕರಿಗೆ ಸರ್ಕಾರ ನೀಡುವ ಸವಲತ್ತುಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನಾಕಾರರು, ಸಮರ್ಪಕ ರೀತಿಯಲ್ಲಿ ಕಾರ್ಮಿಕರಿಗೆ ಸವಲತ್ತುಗಳು ದೊರೆಯುವಂತೆ ಜಿಲ್ಲಾಡಳಿತ ಕ್ರಮವಹಿಸಬೇಕೆಂದು ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಕೆಂಚೇಗೌಡ, ಕಾರ್ಯದರ್ಶಿ ನಿಂಗರಾಜು, ಸಹ ಸಂಚಾಲಕ ರಾಜು, ದೀಪಿ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.