ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪಾಂಡವಪುರ ಪಿ.ಎಸ್.ಎಸ್.ಕೆ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಖಾನೆಗೆ ಭೇಟಿ ನೀಡಿ ಕಬ್ಬು ಅರೆಯುವ ಘಟಕದಿಂದ ಹಿಡಿದು ಸಕ್ಕರೆ ಉತ್ಪಾದನಾ ಘಟಕದವರೆಗೂ ನಡೆಯುವ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಸಿ, ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿದರು.
ನಂತರ ಪಿ.ಎಸ್.ಎಸ್.ಕೆ ಶಾಲೆಗೆ ಭೇಟಿ ನೀಡಿ ಶಾಲೆಯ ಹಾಜರಾತಿ, ಫಲಿತಾಂಶ ಹಾಗೂ ಮೂಲಭೂತ ಸೌಕರ್ಯಗಳು ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಪಾಂಡವಪುರ ತಾಲ್ಲೂಕು ಕಚೇರಿಗೆ ಬೇಟಿ ನೀಡಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗೃ ಲಕ್ಷ್ಮಿ ಯೋಜನೆ ಉದ್ಘಾಟನೆ ಸಂಬಂಧ ಹಾಗೂ ಇಲಾಖಾವಾರು ಸಭೆ ನಡೆಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ವೀಕರಿಸಿ ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡುವಂತೆ ತಿಳಿಸಿದರು.