Thursday, September 19, 2024

ಪ್ರಾಯೋಗಿಕ ಆವೃತ್ತಿ

ಪರ್ಸೆಂಟೇಜ್ ಕೇಳಿದ್ದಾರೆಂಬುದು ಸುಳ್ಳು…. ಪಂ.ರಾಜೀವ್ ತಾರಕನಾಥ್ ಸ್ಪಷ್ಟನೆ

ನಾಡಹಬ್ಬ ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದ, ಬೆನ್ನೆಲ್ಲೇ ತಮ್ಮ ಬಳಿ ಯಾವ ಅಧಿಕಾರಿಯೂ ಕಮೀಷನ್ ಬೇಡಿಕೆ ಇಟ್ಟಿಲ್ಲ ಎಂದು ಸ್ವತಃ ತಾರನಾಥ್‌ ಅವರು ಸ್ಪಷ್ಟಪಡಿಸಿದ್ದಾರೆ.

“>

ಕಮಿಷನ್ ಆರೋಪದ ಹಿನ್ನೆಲೆಯಲ್ಲಿ ಮೈಸೂರು ದಸರಾ ಉತ್ಸವ ಸಮಿತಿಯ ಅಧಿಕಾರಿಗಳು ತಾರಕನಾಥ್ ಅವರ ನಿವಾಸಕ್ಕೆ ತೆರಳಿ ಮಾಹಿತಿ ಸಂಗ್ರಹಿಸಲು ಮುಂದಾದಾಗ, ತಮ್ಮನ್ನು ಯಾವ ಅಧಿಕಾರಿಯೂ ಭೇಟಿಯಾಗಿಲ್ಲ, ಯಾರು ಕಮೀಷನ್ ಕೇಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಮಾತುಕತೆಯ ವೀಡಿಯೋವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!