Thursday, September 19, 2024

ಪ್ರಾಯೋಗಿಕ ಆವೃತ್ತಿ

ಪುನೀತ್ ರಾಜ್‍ಕುಮಾರ್ ಪುಣ್ಯ ಸ್ಮರಣೆ: ಗಣಿಗ ರವಿಕುಮಾರ್ ಭಾಗಿ

ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಮರಲಿಂಗನದೊಡ್ಡಿ ಗ್ರಾಮದ ಚೇತನ್ ಮತ್ತು ಸ್ನೇಹಿತರ ಬಳಗದವರು ಕರ್ನಾಟಕ ರತ್ನ, ಡಾ. ಪುನೀತ್ ರಾಜ್‍ಕುಮಾರ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಆಯೋಜಿಸಿದ್ದರು.

ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪಿ. ರವಿಕುಮಾರ್ ಗೌಡರವರು ಭಾಗವಹಿಸಿ ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್‍ಕುಮಾರ್ ಅವರು ಮಾಡಿದ ಸಾಮಾಜಿಕ ಕೆಲಸಗಳು ಎಂದೆಂದಿಗೂ ಜೀವಂತವಾಗಿರುತ್ತದೆ. ಪುನೀತ್ ಅವರು ನಡೆದ ದಾರಿಯಲ್ಲಿ ಇಂದಿನ ಯುವ ಜನತೆ ಸಾಗಬೇಕು ಎಂದರು.

ಆತ್ಮೀಯ ಸ್ನೇಹಿತರಾದ ಮರಲಿಂಗನದೊಡ್ಡಿ ಗ್ರಾಮದ ಚೇತನ್ ಮತ್ತು ಸ್ನೇಹಿತರ ಬಳಗ ಪುನೀತ್ ರಾಜ್‍ಕುಮಾರ್ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಯೋಜಿಸಿರುವುದು ಪುಣ್ಯ ತರುವ ಕೆಲಸ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಆನಂದ್, ಕಾಂಗ್ರೆಸ್ ಮುಖಂಡರುಗಳಾದ ಆನಂದ್, ಶ್ರೀಕಾಂತ್, ಲಿಂಗ ದೇವರು ಹಾಗೂ ಯುವಕ ಮಿತ್ರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!