ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣ ಮಾಡುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ಗ್ರಾಮಸ್ಥರು ನೋಡಿಕೊಳ್ಳಬೇಕು ಎಂದು ಶಾಸಕ ಎಂ.ಶ್ರೀನಿವಾಸ್ ಹೇಳಿದರು.
ಮಂಡ್ಯ ತಾಲೂಕಿನ ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿ 1ಕೋಟಿ ರೂ.ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೆ.ಆರ್.ಐ.ಡಿ.ಎಲ್. ವತಿಯಿಂದ ಅನುಷ್ಠಾನಗೊಂಡು ಆರ್.ಡಿ.ಪಿ.ಆರ್. ವಿಶೇಷಾನುದಾನದಲ್ಲಿ ಕಸಬಾ ಹೋಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ 10 ಲಕ್ಷ ರೂ, ಬೆಳ್ಳುಂಡಗೆರೆಯಲ್ಲಿ 10 ಲಕ್ಷ ರೂ, ಬಸವನಪುರದಲ್ಲಿ 20 ಲಕ್ಷ ರೂ., ತುಂಬಕೆರೆಯಲ್ಲಿ 40 ಲಕ್ಷ ರೂ., ಕಟ್ಟೆದೊಡ್ಡಿಯಲ್ಲಿ 10 ಲಕ್ಷ ರೂ, ಮಲ್ಲಯ್ಯನದೊಡ್ಡಿಯಲ್ಲಿ 10 ಲಕ್ಷ ರೂ. ವೆಚ್ಚದ ರಸ್ತೆ-ಚರಂಡಿ ಅಭಿವೃದ್ದಿ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಜಿ.ಪಂ. ಮಾಜಿ ಸದಸ್ಯ ಎಚ್.ಎನ್.ಯೋಗೇಶ್ ಅವರು, ಶಾಸಕರಾದ ಎಂ.ಶ್ರೀನಿವಾಸ್ ಅವರು ಪ್ರತಿದಿನ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರ ಪ್ರವಾಸ ಮಾಡುತ್ತಿದ್ದಾರೆ. ಸ್ಥಳೀಯ ಜನರ ಸಮಸ್ಯೆಗಳಿಗೆ ಮತ್ತು ಗ್ರಾಮಸ್ಥರ ಕೋರಿಕೆಯಂತೆ ರಸ್ತೆ, ಚರಂಡಿ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದರು.
ನಿನ್ನೆ 2ಕೋಟಿ ರೂ. ಮತ್ತು ಇಂದು ೧ಕೋಟಿ ರೂ.ಗಳ ಅಭಿವೃದ್ದಿ ಕಾಮಗಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರ ಸಮ್ಮುಖದಲ್ಲಿ ಚಾಲನೆ ನೀಡುತ್ತಿದ್ದಾರೆ. ಅನೇಕ ದೂರುಗಳನ್ನು, ಜನತೆಯ ಅಹವಾಲುಗಳ ಸ್ವೀಕರಿಸಿ, ಸ್ಥಳೀಯ ಅಧಿಕಾರಿಗಳಿಗೆ ಕೆಲಸ ಮಾಡುವಂತೆ ಸೂಚನೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಿರುತೆರೆ ನಾಯಕನಟ ವಿಶಾಲ್ರಘು, ಕಸಬಾ ಹೋಬಳಿಯ ವಿವಿಧ ಗ್ರಾಮಗಳ ಮುಖಂಡರಾದ ಶಶಿಧರ್, ರಾಜಣ್ಣ, ಪ್ರಕಾಶ್, ಪುಟ್ಟಸ್ವಾಮಿ, ಶೇಖರ್, ಜಯರಾಂ, ನಾರಾಯಣ, ರಾಮಕೃಷ್ಣ, ಹರೀಶ್, ಅನಿತಾ. ಕಿರಣ್ಕುಮಾರ್, ನಂದೀಶ್ ಮತ್ತಿತರರಿದ್ದರು