Thursday, September 19, 2024

ಪ್ರಾಯೋಗಿಕ ಆವೃತ್ತಿ

ಧಾರವಾಡ| ಪೊಲೀಸ್‌ ಠಾಣೆ ಮುತ್ತಿಗೆಗೆ ಯತ್ನ ಆರ್ ಅಶೋಕ್ ಪೊಲೀಸರ ವಶಕ್ಕೆ

ಕರಸೇವಕರ ಬಂಧನವನ್ನು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಶಹರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಸೇರಿದಂತೆ ಹಲವಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

30 ವರ್ಷಗಳ ಹಿಂದೆ, 1992ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಂಧನವನ್ನು ಖಂಡಿಸಿ ಆರ್‌ ಅಶೋಕ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ನಡೆದಿದೆ.

ಪೊಲೀಸ್‌ ಠಾಣೆಗೆ ಮುತ್ತಿಗೆಗೆ ಯತ್ನಿಸುವುದಕ್ಕೂ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡದ ಆರ್‌ ಅಶೋಕ್, “ಶ್ರೀಕಾಂತ ಪೂಜಾರ ಬಂಧನಕ್ಕೆ ಮುನ್ನ ಬಂಧನ ಪೂರ್ವ ವಾರಂಟ್ ಮಾಡಿದ್ದರೆ? ಪೊಲೀಸ್‌ ದಾಖಲೆಯಲ್ಲಿ ಎಫ್‌ಐಆರ್‌ ಇದೆಯೇ? ದೂರು ಪ್ರತಿಗಳಿವೆಯೇ” ಎಂದು ಪ್ರಶ್ನಿಸಿದ್ದಾರೆ.

“ನ್ಯಾಯಾಲಯ ರಜೆ ಇದ್ದಾಗ ಆರೋಪಿಯನ್ನು ಬಂಧಿಸಬಾರದೆಂಬ ನಿಯಮವಿದೆ. ಆದರೂ, ಯಾರು ನಿರ್ದೇಶನದ ಮೇಲೆ ಶ್ರೀಕಾಂತನನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ 69,000 ಎಲ್‌ಪಿಆರ್ ಪ್ರಕರಣಗಳಿವೆ. ಅವುಗಳಲ್ಲಿ ಎಷ್ಟು ಆರೋಪಿಗಳನ್ನು ಬಂಧಿಸಲಾಗಿದೆ” ಎಂದು ಪ್ರಶ್ನಿಸಿದ್ದಾರೆ.

“ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ವಿರುದ್ಧವೂ ಪ್ರಕರಣಗಳಿವೆ. ಆದರೆ, ಅವರ ಬಂಧನವನ್ನು ವಿರೋಧಿಸುತ್ತಾರೆ. ಶ್ರೀಕಾಂತನನ್ನು ಬಂಧಿಸುತ್ತಾರೆ. ಪೊಲೀಸರು ಸರ್ಕಾರದ ಮಾತು ಕಳೆದೆ, ವಿಚಾರ ಮಾಡಬೇಕು. ರಾಮ ಭಕ್ತರನ್ನ ಕೆಣಕಿ ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪ್ರತಿಭಟನೆ ಬಳಿಕ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದು, ಈ ವೇಳೆ, ಆರ್ ಅಶೋಕ್, ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!