Friday, September 20, 2024

ಪ್ರಾಯೋಗಿಕ ಆವೃತ್ತಿ

ಒಡಿಸ್ಸಾ ಪ್ರವೇಶಿಸಿ ಭಾರತ ಜೋಡೋ ನ್ಯಾಯ ಯಾತ್ರೆ| ನಿರುದ್ಯೋಗದ ಬಗ್ಗೆ ದನಿಯೆತ್ತಿದ್ದ ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್ ಬಳಿಕ  ಒಡಿಶಾವನ್ನು ಪ್ರವೇಶಿಸಿದೆ. ಇಂದು ರೂರ್ಕೆಲಾದ ವೇದವ್ಯಾಸ್ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಈ ದೇವಾಲಯದ ಗುಹೆಯು ಋಷಿ ಮತ್ತು ಕವಿ ವೇದವ್ಯಾಸ್ ಅವರು ಮಹಾಭಾರತವನ್ನು ರಚಿಸಿದ ಸ್ಥಳವೆಂದು ಪರಿಗಣಿಸಲಾಗಿದೆ.

ಸುಂದರ್‌ಗಢ್ ಜಿಲ್ಲೆಯ ಸಣ್ಣ ಕೈಗಾರಿಕಾ ಪಟ್ಟಣವಾದ ಬೀರಮಿತ್ರಪುರದಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗಿದೆ. ಈ ಸಂದರ್ಭದಲ್ಲಿ ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಒಡಿಶಾ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟ್ನಾಯಕ್ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಯಾತ್ರೆ ಪಟ್ಟಣ ಪ್ರವೇಶಿಸುವುದಕ್ಕೆ ಮೊದಲೇ ಬೀರಮಿತ್ರಪುರದಲ್ಲಿ ಬ್ಯಾನರ್‌ಗಳು, ಕಟೌಟ್‌ಗಳು ಮತ್ತು ರಾಹುಲ್ ಗಾಂಧಿಯವರ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು.
ಒಡಿಶಾದಲ್ಲಿ ಬಿಜೆಪಿ ಮತ್ತು ಬಿಜೆಡಿ ಪಾಲುದಾರಿಕೆಯನ್ನು ಹೊಂದಿದೆ, ರಾಜ್ಯದ ಜನರ ಹಿತಾಸಕ್ತಿ ಕಾಪಾಡಲು ನಾವು ಬಿಜೆಪಿ ಮತ್ತು ಬಿಜೆಡಿಯನ್ನು ವಿರೋಧಿಸುತ್ತಿದ್ದೇವೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ಮತ್ತು ನರೇಂದ್ರ ಮೋದಿ ಪಾಲುದಾರಿ ಸರಕಾರವನ್ನು ಹೊಂದಿದ್ದಾರೆ. ಅವರಿಬ್ಬರೂ ಕೈ ಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಬಿಜೆಡಿ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ನಾನು ಸಂಸತ್ತಿನಲ್ಲಿ ಕಂಡುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾನು ಒಡಿಶಾಗೆ ಬಂದಿದ್ದೇನೆ. ರಾಜ್ಯದಿಂದ 30 ಲಕ್ಷ ಜನರು ಜೀವನೋಪಾಯಕ್ಕಾಗಿ ಇತರ ರಾಜ್ಯಗಳಿಗೆ ಕಾರ್ಮಿಕರಾಗಿ ವಲಸೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

“>

 

ಒಡಿಶಾದಲ್ಲಿ ಬುಡಕಟ್ಟು ಜನಾಂಗದ ಹೆಚ್ಚಿನ ಜನಸಂಖ್ಯೆ ಇದೆ. ದಲಿತರ ಜೊತೆಗೆ ಬುಡಕಟ್ಟು ಜನರನ್ನು ಕೂಡ ಸರ್ಕಾರವು ರಾಜ್ಯದಲ್ಲಿ ನಿರ್ಲಕ್ಷಿಸಿದೆ. ನಾನು 6-7 ಗಂಟೆಗಳ ಕಾಲ ನಿಮ್ಮ ‘ಮಾನ್ ಕಿ ಬಾತ್’ ಕೇಳಲು ಮತ್ತು 15 ನಿಮಿಷಗಳ ಕಾಲ ಸ್ವಲ್ಪ ಮಾತನಾಡಲು ಇಲ್ಲಿಗೆ ಬಂದಿದ್ದೇನೆ. ಕೈಗಾರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಒಡಿಶಾದ ದೊಡ್ಡ ಸಮಸ್ಯೆ ನಿರುದ್ಯೋಗವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಅಖಿಲೇಶ್‌ ಯಾದವ್‌ ಹೇಳಿಕೆ

ಫೆಬ್ರವರಿ 16 ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಸೇರಲು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಪ್ರದೇಶದಲ್ಲಿ ಯಾತ್ರೆಗೆ ಸೇರಲು ಅಖಿಲೇಶ್ ಯಾದವ್‌ಗೆ ನೀಡಿದ ಆಹ್ವಾನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಅಖಿಲೇಶ್ ಕಾಂಗ್ರೆಸ್‌ಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 16 ರಂದು ಉತ್ತರಪ್ರದೇಶದಲ್ಲಿ ಸಾಗಲಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಅಖಿಲೇಶ್‌ ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.

ಜೈರಾಮ್‌ ರಮೇಶ್, ಕನ್ಹಯ್ಯಾ ಕುಮಾರ್ ಹೇಳಿಕೆ

ಪ್ರಧಾನಿ ಮೋದಿ ಮೂರನೇ ಬಾರಿಗೆ ಬಂದರೆ, ನನ್ನ ಮಾತುಗಳನ್ನು ಗಮನದಲ್ಲಿಟ್ಟುಕೊಳ್ಳಿ, ರೂರ್ಕೆಲಾ (ಒಡಿಶಾದ  ನಗರ) ಕೂಡ ಮಾರಾಟ ಮಾಡುತ್ತಾರೆ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್ ಹೇಳಿದ್ದಾರೆ.

ಪ್ರಧಾನಿ ಮೋದಿ ಅಹಂಕಾರ ಆಚಾರ್ಯ, ಅವರನ್ನು ಪ್ರಶ್ನಿಸುವ ಧೈರ್ಯ ಯಾರಿಗೂ ಇಲ್ಲ. ಪ್ರಧಾನಿ ಮೋದಿ ನಮಗೆ ‘ಉದ್ಯೋಗ ನೀಡುವವರು’ ಎಂದು ಹೇಳುತ್ತಾರೆ. ಅವರು ಉದ್ಯೋಗ ಕಸಿದುಕೊಳ್ಳುವವರಾಗಿದ್ದಾರೆ.. ಮತ್ತೆ ಅವರು ಹೇಗೆ ಉದ್ಯೋಗ ನೀಡುವವರಾಗುತ್ತಾರೆ? ಮಾಧ್ಯಮಗಳು ಸ್ವತಂತ್ರವಾಗಿರಬೇಕು ಮತ್ತು ಮಾದ್ಯಮಗಳು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನಮ್ಮ ಯಾತ್ರೆಯು ಯುವ ನ್ಯಾಯ, ಸಹಭಾಗಿತ್ವ, ಮಹಿಳಾ ನ್ಯಾಯ, ರೈತರಿಗೆ ನ್ಯಾಯ ಮತ್ತು ಕಾರ್ಮಿಕರ ನ್ಯಾಯದ ಕುರಿತು ಮಾತನಾಡುತ್ತದೆ. ನಮ್ಮ ಯಾತ್ರೆಯು ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿದೆ ಎಂದು ಕನ್ಹಯ್ಯಾ ಕುಮಾರ್ ಇದೇ ವೇಳೆ ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!