ಸತತವಾಗಿ ಸುರಿದ ಭಾರೀ ಮಳೆಯಿಂದ ನಷ್ಟ ಅನುಭವಿಸಿದ ಮಂಡ್ಯ ನಗರದ ಗುತ್ತಲು ಅರಕೇಶ್ವರ ಬಡಾವಣೆಯ ಐವರು ನಿವಾಸಿಗಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ನಿಂದ ಆರ್ಥಿಕ ನೆರವು ನೀಡಲಾಯಿತು.
ಮಳೆಯಿಂದ ಮನೆಗಳಿಗೆ ಸಾಕಷ್ಟು ನೀರು ನುಗ್ಗಿ ಗೋಡೆ ಕುಸಿದು, ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳಿಗೆ ಸಾಕಷ್ಟು ಹಾನಿಯಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಶಂಭು ಸೇವಾ ಟ್ರಸ್ಟ್ ಹಾಗೂ ಮನ್ ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರು ಇಲ್ಲಿನ ನಿವಾಸಿಗಳಿಗೆ ಕೈಲಾದ ಮಟ್ಟಿಗೆ ಸಹಾಯ ಮಾಡಲು ಮುಂದಾದರು.
ಅದರಂತೆ ಶಂಭು ಸೇವಾ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಬಿ.ಆರ್.ಸುರೇಶ್ ತಮ್ಮ ಟ್ರಸ್ಟ್ ಸದಸ್ಯರ ಜೊತೆಗೂಡಿ ಮಳೆ ಹಾನಿಯಿಂದ ನೊಂದ ಕುಟುಂಬಗಳಿಗೆ ಆರ್ಥಿಕವಾಗಿ ಧನಸಹಾಯ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ಸೌಭಾಗ್ಯವತಿ,ಜೆಡಿಎಸ್ ಮುಖಂಡರಾದ ಮಂಜುನಾಥ್, ಚಂದ್ರು ಮತ್ತಿತರರಿದ್ದರು.