Friday, September 20, 2024

ಪ್ರಾಯೋಗಿಕ ಆವೃತ್ತಿ

ಸಿಎಂ ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ನಾಳೆ ರಾಜಭವನ ಚಲೋ

ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ಬಿಜೆಪಿ-ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆ.27ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ರಾಜಭವನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಶೋಷಿತ ಸಮುದಾಯ, ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ನವರ ಅಭಿಮಾನಿಗಳು ಮಂಡ್ಯ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ ರಾಜಭವನ ಚಲೋ ಕಾರ್ಯಕ್ರಮ ವನ್ನು ಯಶಸ್ವಿ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಂಡ್ಯ ಜಿಲ್ಲಾಧ್ಯಕ್ಷ ಕೆ.ಹೆಚ್. ನಾಗರಾಜು ಮನವಿ ಮಾಡಿದರು.

ಮಂಡ್ಯ ನಗರದ ಕುರುಬರ ಸಂಘದ ಕಚೇರಿಯಲ್ಲಿ ರಾಜಭವನ ಚಲೋ ಬಗ್ಗೆ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವ ಕೆಲಸ

ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವ ಕೆಲಸವನ್ನು ಈ ತಕ್ಷಣವೇ ನಿಲ್ಲಿಸಬೇಕು.ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೆ ವಾಪಸ್ಸು ಕರೆಸಿಕೊಳ್ಳಬೇಕು. ಸಿದ್ದರಾಮಯ್ಯರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆ ಯಬೇಕು,ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು.ಕನ್ನಡ ನಾಡಿನ ಘನತೆಯನ್ನು ಕಾಪಾಡಬೇಕೆಂದು ಆಗ್ರಹಿಸಿದರು.

ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ರಾಜಭವನವನ್ನು ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಪ್ಯೂಡಲ್ ವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಪಕ್ಷಗಳ ಕಛೇರಿಯನ್ನಾಗಿ ಪರಿವರ್ತಿಸಿಕೊಂಡಿ ದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿರು ವುದಷ್ಟೆ ಅಲ್ಲ ತೀವು ಪಕ್ಷಪಾತಿ ಧೋರಣೆಯನ್ನು ತಾಳಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಗಳ ವಿರುದ್ಧ ನಡೆಯುತ್ತಿರುವ ಪಿತೂರಿ- ಷಡ್ಯಂತ್ರಗಳ ಭಾಗವಾಗಿದ್ದಾರೆ.ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ದುಷ್ಟರು, ಭ್ರಷ್ಟರೂ ಆದ ಬಿಜೆಪಿ-ಜೆಡಿಎಸ್ ಪಕ್ಷಗಳ ಹಿತಾಸಕ್ತಿಗೆ ಅಡವಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮುಡಾ ವಿಚಾರದಲ್ಲಿ ಒಂದು ಸೂಜಿ ಮೊನೆಯಷ್ಟೂ ತಪ್ಪು ಮಾಡಿಲ್ಲವೆಂದು ಇಡೀ ರಾಜ್ಯದ ಜನ ಹೇಳುತ್ತಿದ್ದಾರೆ ಹಾಗು ಸರ್ಕಾರಿ ದಾಖಲೆಗಳೂ ಹೇಳುತ್ತಿವೆ.ಆದರೆ ರಾಜಕೀಯ ದುರುದ್ದೇಶದಿಂದ ಬಿಜೆಪಿ-ಜೆಡಿಎಸ್‌ಗಳು ಸಿದ್ದರಾಮಯ್ಯನವರನ್ನು ತೇಜೋವಧೆ ಮಾಡುತ್ತಲೇ ಹೊರಟಿದ್ದಾರೆ ಎಂದು ಹೇಳಿದರು.

ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ.ಎಲ್.ಸುರೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.27ರಂದು “ರಾಜಭವನ ಚಲೋ’ ಹಮ್ಮಿಕೊಳ್ಳ ಲಾಗಿದೆ. ಈ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಈ ತಕ್ಷಣವೇ ನಿಲ್ಲಿಸಬೇಕು. ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಪ್ರಧಾನಿ ಮೋದಿ ಸರ್ಕಾರ ಕೂಡಲೆ ವಾಪಸ್ಸು ಕರೆಸಿಕೊಳ್ಳಬೇಕು,ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಭಿಯೋಜನೆಗೆ ಅನುಮತಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಭೆಯಲ್ಲಿ ಶೋಷಿತ ಸಮುದಾಯಗಳ ಮುಖಂಡರಾದ ವಿಜಯಲಕ್ಷ್ಮಿ ರಘುನಂದನ್, ಅಮ್ಜದ್ ಪಾಷ, ಎಲ್.ಸಂದೇಶ್, ಸಾತನೂರು ಕೃಷ್ಣ, ರಾಜು, ರಮೇಶ್, ರಾಜಣ್ಣ, ಮರಿಹೆಗ್ಗಡೆ, ಎನ್. ದೊಡ್ಡಯ್ಯ,ಚಂದಗಾಲು ವಿಜಯಕುಮಾರ್,ಸುಂಡಹಳ್ಳಿ ಮಂಜುನಾಥ್, ಮಹೇಶ್,ಸುಮನ್,ನಾಗರತ್ನ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!