Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಗೆ ಮುತ್ತಿಗೆ : ಖಂಡನೆ

ರಾಜ್ಯಸಭಾ ಸದಸ್ಯ ಈರಣ ಕಡಾಡಿ ಅವರಿಗೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ಮುತ್ತಿಗೆ ಹಾಕಿ, ಹಲ್ಲೆ ನಡೆಸಲು ಯತ್ನಿಸಿರುವುದು ಖಂಡನೀಯ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗಿಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈರಣ್ಣ ಕಡಾಡಿ ಅವರ ಕಾರನ್ನು ಅಡ್ಡಗಟ್ಟಿ ಸತೀಶ್ ಜಾರಕಿಹೊಳಿಯ ಬೆಂಬಲಿಗರು ಹಲ್ಲೆಗೆ ಯತ್ನಿಸಿರುವ ಕೃತ್ಯ ಸತೀಶ್ ಜಾರಕಿಹೊಳಿ ಅವರಿಗೆ ಶೋಭೆ ತರುವಂತದ್ದಲ್ಲ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇರುತ್ತದೆ, ಪ್ರತಿಭಟನೆಗಳು ಜನ ಪರವಾಗಿರಬೇಕು, ಆದರೆ, ದ್ವೇಷ ಸಾಧನೆಗೋಸ್ಕರ ಬಳಸಿಕೊಳ್ಳಬಾರದು ಎಂದರು.

ಗೋಷ್ಠಿಯಲ್ಲಿ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಯಮದೂರು ಸಿದ್ದರಾಜು, ಕಾರ್ಯದರ್ಶಿಗಳಾದ ಕೃಷ್ಣ, ನಿಂಗರಾಜು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!