ಮಂಡ್ಯ ತಾಲ್ಲೂಕಿನ ಹುಲಿವಾನ ಗ್ರಾಮದ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಶನಿವಾರ ಧನಸಹಾಯ ಮಾಡಿದರು.
ಹುಲಿವಾನ ಗ್ರಾಮದ ಶ್ರೀ ಲಕ್ಷ್ಮಿದೇವಿ, ಶ್ರೀ ಸೋಮನಾಳಮ್ಮ ಹಾಗೂ ಹಿರಿದೇವಮ್ಮ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಶ್ರೀ ಶಂಭು ಸೇವಾ ಟ್ರಸ್ಟ್ ಮೂಲಕ ಧನಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಂಭು ಸೇವಾ ಟ್ರಸ್ಟ್ ಮೂಲಕ ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ದೇವಸ್ಥಾನಗಳ ನಿರ್ಮಾಣ ಹಾಗೂ ಜೀರ್ಣೋದ್ಧಾರಕ್ಕೆ ಧನಸಹಾಯ ಮಾಡಲಾಗಿದೆ. ನಮ್ಮ ಸಂಸ್ಕೃತಿ,ಪರಂಪರೆ ಬಿಂಬಿಸುವ ದೇವಸ್ಥಾನಗಳಿಗೆ ನನ್ನ ಕೈಲಾದ ಆರ್ಥಿಕ ಸಹಾಯ ಮಾಡುತ್ತಿರುವುದು ಮನಸ್ಸಿಗೆ ನೆಮ್ಮದಿ ತಂದಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ನಾಗಣ್ಣ, ಮಾದೇಗೌಡ, ರಮೇಶ್, ವಿಜಯ್, ರವಿಕುಮಾರ್, ಕೃಷ್ಣ, ನಾಗರಾಜು ಹಾಗೂ ಊರಿನ ಯಜಮಾನರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.