Monday, September 16, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸೆ.8ರಂದು ‘ರಣಧೀರ ಕಂಠೀರವ’ ಕೃತಿ ಲೋಕಾರ್ಪಣೆ

ಕಾವೇರಿ ಪ್ರಕಾಶನದ ವತಿಯಿಂದ ಗಣಂಗೂರು ನಂಜೇಗೌಡ ರಚಿಸಿರುವ ‘ರಣಧೀರ ಕಂಠೀರವ’ ಕೃತಿ ಲೋಕಾರ್ಪಣೆ ಕಾರ್ಯಕ್ರಮವು ಇದೆ ಸೆ.8ರಂದು ಬೆಳಿಗ್ಗೆ 10.30 ಗಂಟೆಗೆ ಮಂಡ್ಯ ನಗರದ ಕರ್ನಾಟಕ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಸಮರ್ಥನ ಟ್ರಸ್ಟ್ ಅಧ್ಯಕ್ಷ ಜಯ್ ಶಂಕರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ  ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ರಮೇಶ್ ಬಂಡಿಸಿದ್ದೇಗೌಡ ಉದ್ಘಾಟಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎನ್ .ಎಲ್. ಮುಕುಂದರಾಜ್ ಕೃತಿಯನ್ನು ಬಿಡುಗಡೆ ಮಾಡಲಿದ್ದು, ಇತಿಹಾಸ ಸಂಶೋಧಕ ತೈಲೂರು ವೆಂಕಟ ಕೃಷ್ಣ ಅವರು ಕೃತಿಯ ಬಗ್ಗೆ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಅಲಯನ್ಸ್ ಜಿಲ್ಲಾ ರಾಜ್ಯಪಾಲ ಕೆಟಿ ಹನುಮಂತ, ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿಪಿ ಪ್ರಕಾಶ್ ಭಾಗವಹಿಸುವರು, ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ಯೋಗ ತರಬೇತಿದಾರ ಅಪ್ಪಾಜಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!